ಜಿಲ್ಲೆಗಳು

ಗೃಹ ಕಾರ್ಯದರ್ಶಿಗೆ ಒಡನಾಡಿ ದೂರು

ಒಡನಾಡಿಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಪೊಲೀಸರ ಅಕ್ರಮ ಪ್ರವೇಶ

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಗೃಹ ಇಲಾಖೆ ಕಾರ್ಯದರ್ಶಿಗಳು, ನಗರ ಪೊಲೀಸ ಆಯುಕ್ತರು, ಮಕ್ಕಳ ಕಲ್ಯಾಣ ಸಮಿತಿ ಮತ್ತು ವಿಜಯನಗರ ಪೊಲೀಸ್ ಠಾಣೆಗೆ ಒಡನಾಡಿ ಸಂಸ್ಥೆಯಿಂದ ದೂರು ನೀಡಲಾಗಿದೆ.

ನ.30ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ 10 ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಸ್ಥೆಯ ನಿರ್ದೇಶಕರು ಅವರನ್ನು ತಡೆದು, ಕಾನೂನು ಬದ್ಧವಾಗಿ ಶೋಧ ನಡೆಸಿ, ಯಾವುದೇ ನೋಟಿಸ್ ಇಲ್ಲದೇ ಹೀಗೆ ಬಂದು ಹುಡುಕಾಟ ನಡೆಸುವುದು ಸರಿಯಲ್ಲ. ನೀವು ಇಲ್ಲಿಗೆ ಬರಬೇಕಾದರೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳೊಂದಿಗೆ ಇಲ್ಲಿ ಬರಬೇಕು. ನಿಮಗೆ ಕಾನೂನಿನ ಅರಿವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ನಾವು ಮಕ್ಕಳ ಕಲ್ಯಾಣ ಸಮಿತಿ ಎಂದು ಭಾವಿಸಿ ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದ್ದಾರೆ. ನೀವು ಇಲ್ಲಿಗೆ ಬಂದಿರುವುದು ಎರಡನೇ ಬಾರಿ ಹೀಗಿರುವಾಗ ಹೇಗೆ ಮಕ್ಕಳ ಕಲ್ಯಾಣ ಸಮಿತಿ ಎಂದು ತಿಳಿದುಕೊಂಡಿರಿ ಎಂದು ಕೇಳಿದ್ದಾರೆ. ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ತಪ್ಪಾಯಿತು ಎಂದು ಕ್ಷಮೆ ಕೇಳಿ ಹೋಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಕಾನೂನು ಬಾಹಿರವಾಗಿ ಸಂಸ್ಥೆಗೆ ಬಂದು ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಯ ಕಾರ್ಯದರ್ಶಿಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಮೇಲ್ ಮೂಲಕ, ನಗರ ಪೊಲೀಸ್ ಆಯುಕ್ತರು ಮತ್ತು ವಿಜಯನಗರ ಪೊಲೀಸ್ ಠಾಣೆ ಟಪಾಲು ಮೂಲಕ ದೂರು ನೀಡಲಾಗಿದೆ.

ಒಡನಾಡಿ ಸಂಸ್ಥೆಯಿಂದ ನನಗೆ ಇನ್ನೂ ಯಾವ ದೂರು ಬಂದಿಲ್ಲ. ಬಂದ ನಂತರ ಇದರ ಬಗ್ಗೆ ಪ್ರತಿಕ್ರಿಯಿಸುತ್ತೇನೆ. -ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ.

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

24 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

29 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

38 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago