ಜಿಲ್ಲೆಗಳು

ಗೃಹ ಕಾರ್ಯದರ್ಶಿಗೆ ಒಡನಾಡಿ ದೂರು

ಒಡನಾಡಿಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಪೊಲೀಸರ ಅಕ್ರಮ ಪ್ರವೇಶ

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಗೃಹ ಇಲಾಖೆ ಕಾರ್ಯದರ್ಶಿಗಳು, ನಗರ ಪೊಲೀಸ ಆಯುಕ್ತರು, ಮಕ್ಕಳ ಕಲ್ಯಾಣ ಸಮಿತಿ ಮತ್ತು ವಿಜಯನಗರ ಪೊಲೀಸ್ ಠಾಣೆಗೆ ಒಡನಾಡಿ ಸಂಸ್ಥೆಯಿಂದ ದೂರು ನೀಡಲಾಗಿದೆ.

ನ.30ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ 10 ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಸ್ಥೆಯ ನಿರ್ದೇಶಕರು ಅವರನ್ನು ತಡೆದು, ಕಾನೂನು ಬದ್ಧವಾಗಿ ಶೋಧ ನಡೆಸಿ, ಯಾವುದೇ ನೋಟಿಸ್ ಇಲ್ಲದೇ ಹೀಗೆ ಬಂದು ಹುಡುಕಾಟ ನಡೆಸುವುದು ಸರಿಯಲ್ಲ. ನೀವು ಇಲ್ಲಿಗೆ ಬರಬೇಕಾದರೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳೊಂದಿಗೆ ಇಲ್ಲಿ ಬರಬೇಕು. ನಿಮಗೆ ಕಾನೂನಿನ ಅರಿವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ನಾವು ಮಕ್ಕಳ ಕಲ್ಯಾಣ ಸಮಿತಿ ಎಂದು ಭಾವಿಸಿ ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದ್ದಾರೆ. ನೀವು ಇಲ್ಲಿಗೆ ಬಂದಿರುವುದು ಎರಡನೇ ಬಾರಿ ಹೀಗಿರುವಾಗ ಹೇಗೆ ಮಕ್ಕಳ ಕಲ್ಯಾಣ ಸಮಿತಿ ಎಂದು ತಿಳಿದುಕೊಂಡಿರಿ ಎಂದು ಕೇಳಿದ್ದಾರೆ. ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ತಪ್ಪಾಯಿತು ಎಂದು ಕ್ಷಮೆ ಕೇಳಿ ಹೋಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಕಾನೂನು ಬಾಹಿರವಾಗಿ ಸಂಸ್ಥೆಗೆ ಬಂದು ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಯ ಕಾರ್ಯದರ್ಶಿಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಮೇಲ್ ಮೂಲಕ, ನಗರ ಪೊಲೀಸ್ ಆಯುಕ್ತರು ಮತ್ತು ವಿಜಯನಗರ ಪೊಲೀಸ್ ಠಾಣೆ ಟಪಾಲು ಮೂಲಕ ದೂರು ನೀಡಲಾಗಿದೆ.

ಒಡನಾಡಿ ಸಂಸ್ಥೆಯಿಂದ ನನಗೆ ಇನ್ನೂ ಯಾವ ದೂರು ಬಂದಿಲ್ಲ. ಬಂದ ನಂತರ ಇದರ ಬಗ್ಗೆ ಪ್ರತಿಕ್ರಿಯಿಸುತ್ತೇನೆ. -ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ.

andolana

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago