ಜಿಲ್ಲೆಗಳು

ಗೃಹ ಕಾರ್ಯದರ್ಶಿಗೆ ಒಡನಾಡಿ ದೂರು

ಒಡನಾಡಿಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಪೊಲೀಸರ ಅಕ್ರಮ ಪ್ರವೇಶ

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಗೃಹ ಇಲಾಖೆ ಕಾರ್ಯದರ್ಶಿಗಳು, ನಗರ ಪೊಲೀಸ ಆಯುಕ್ತರು, ಮಕ್ಕಳ ಕಲ್ಯಾಣ ಸಮಿತಿ ಮತ್ತು ವಿಜಯನಗರ ಪೊಲೀಸ್ ಠಾಣೆಗೆ ಒಡನಾಡಿ ಸಂಸ್ಥೆಯಿಂದ ದೂರು ನೀಡಲಾಗಿದೆ.

ನ.30ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ 10 ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಸ್ಥೆಯ ನಿರ್ದೇಶಕರು ಅವರನ್ನು ತಡೆದು, ಕಾನೂನು ಬದ್ಧವಾಗಿ ಶೋಧ ನಡೆಸಿ, ಯಾವುದೇ ನೋಟಿಸ್ ಇಲ್ಲದೇ ಹೀಗೆ ಬಂದು ಹುಡುಕಾಟ ನಡೆಸುವುದು ಸರಿಯಲ್ಲ. ನೀವು ಇಲ್ಲಿಗೆ ಬರಬೇಕಾದರೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳೊಂದಿಗೆ ಇಲ್ಲಿ ಬರಬೇಕು. ನಿಮಗೆ ಕಾನೂನಿನ ಅರಿವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ನಾವು ಮಕ್ಕಳ ಕಲ್ಯಾಣ ಸಮಿತಿ ಎಂದು ಭಾವಿಸಿ ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದ್ದಾರೆ. ನೀವು ಇಲ್ಲಿಗೆ ಬಂದಿರುವುದು ಎರಡನೇ ಬಾರಿ ಹೀಗಿರುವಾಗ ಹೇಗೆ ಮಕ್ಕಳ ಕಲ್ಯಾಣ ಸಮಿತಿ ಎಂದು ತಿಳಿದುಕೊಂಡಿರಿ ಎಂದು ಕೇಳಿದ್ದಾರೆ. ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ತಪ್ಪಾಯಿತು ಎಂದು ಕ್ಷಮೆ ಕೇಳಿ ಹೋಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಕಾನೂನು ಬಾಹಿರವಾಗಿ ಸಂಸ್ಥೆಗೆ ಬಂದು ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಯ ಕಾರ್ಯದರ್ಶಿಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಮೇಲ್ ಮೂಲಕ, ನಗರ ಪೊಲೀಸ್ ಆಯುಕ್ತರು ಮತ್ತು ವಿಜಯನಗರ ಪೊಲೀಸ್ ಠಾಣೆ ಟಪಾಲು ಮೂಲಕ ದೂರು ನೀಡಲಾಗಿದೆ.

ಒಡನಾಡಿ ಸಂಸ್ಥೆಯಿಂದ ನನಗೆ ಇನ್ನೂ ಯಾವ ದೂರು ಬಂದಿಲ್ಲ. ಬಂದ ನಂತರ ಇದರ ಬಗ್ಗೆ ಪ್ರತಿಕ್ರಿಯಿಸುತ್ತೇನೆ. -ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ.

andolana

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

2 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

9 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

9 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

9 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

10 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

12 hours ago