ಜಿಲ್ಲೆಗಳು

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸಲ್ಲಿಕೆ

ಮೈಸೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಮೈಸೂರು ಜಿಲ್ಲೆಯ ಪತ್ರಕರ್ತರನ್ನು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಅಭಿನಂದಿಸಲಾಯಿತು.

ನಗರದ ಪತ್ರಕರ್ತರ ಭವನದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ‘ಆಂದೋಲನ’ ದಿನ ಪತ್ರಿಕೆಯ ಹಿರಿಯ ಉಪಸಂಪಾದಕ ಮುಳ್ಳೂರು ಶಿವಪ್ರಸಾದ್, ಹಿರಿಯ ವರದಿಗಾರ ಕೆ.ಬಿ.ರಮೇಶ ನಾಯಕ, ವಿಜಯವಾಣಿ ಪತ್ರಿಕೆ ಹಿರಿಯ ಉಪಸಂಪಾದಕ ಮುಳ್ಳೂರು ರಾಜು, ದಿ ಹಿಂದೂ ಪತ್ರಿಕೆಯ ಹಿರಿಯ ವರದಿಗಾರ ಶಂಕರ್ ಬೆನ್ನೂರು, ವಿಜಯ ಕರ್ನಾಟಕದ ಹಿರಿಯ ಛಾಯಾಗ್ರಾಹಕ ನಾಗೇಶ್ ಪಾಣತ್ತಲೆ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಕೆ.ಪಿ.ನಾಗರಾಜ್, ಹುಣಸೂರು ತಾಲ್ಲೂಕು ವಿಜಯವಾಣಿ ವರದಿಗಾರ ಶಿವಕುಮಾರ್‌ ವಿ.ರಾವ್, ಉದಯವಾಣಿಯ ಗ್ರಾಮೀಣ ಸುದ್ದಿ ವಿಭಾಗದ ಮುಖ್ಯಸ್ಥ ಅ.ಮ.ಸುರೇಶ್ ಅವರಿಗೆ ಗೌರವ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಸದ ಪ್ರತಾಪಸಿಂಹ, ಮಾಧ್ಯಮದಲ್ಲಿ ಕೆಲಸ ಮಾಡಲು ಬಯಸುವ ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಪತ್ರಿಕೆ ಕಚೇರಿಗೆ ಹೋಗಿ ವರದಿಗಾರಿಕೆ, ಸುದ್ದಿ ಮನೆಯ ಕಾರ್ಯಚಟುವಟಿಕೆಗಳನ್ನು ತಿಳಿದುಕೊಂಡಿರಬೇಕು. ನಾನು ರಾಜಕೀಯ ಕ್ಷೇತ್ರದಲ್ಲಿದ್ದರೂ ನನ್ನೊಳಗಿನ ಪತ್ರಕರ್ತ ಇನ್ನೂ ಜಾಗೃತನಾಗಿದ್ದಾನೆ. ಹಾಗಾಗಿ ನನ್ನನ್ನು ಸದಾ ವಿಮರ್ಶೆಗೆ ಒಳಪಡಿಸಿಕೊಳ್ಳುತ್ತೇನೆ. ಪತ್ರಿಕೆಗಳಲ್ಲಿ ಬರುವ ಟೀಕೆಗಳನ್ನು ಮತ್ತು ವರದಿಗಳನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ. ಹೀಗಾಗಿ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗಲಿದೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಉದಯವಾಣಿ ಪತ್ರಿಕೆಯ ಗ್ರಾಮೀಣ ಸುದ್ದಿ ವಿಭಾಗದ ಮುಖ್ಯಸ್ಥ ಅ.ಮ.ಸುರೇಶ್, ಮುದ್ರಣ ಮಾಧ್ಯಮ ಇಂದು ಸಾಕಷ್ಟು ಬದಲಾವಣೆ ಕಂಡಿದೆ. ಇಂದು ಪತ್ರಿಕೆ ಹಂಚಲು ಜನ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಟಿವಿ, ಸಾಮಾಜಿಕ ಜಾಲತಾಣಗಳ ಆರ್ಭಟಕ್ಕೆ ಪತ್ರಿಕೆಗಳ ಆದಾಯವೂ ಕ್ಷೀಣಿಸಿದೆ. ಪರಿಣಾಮ ಕೋವಿಡ್ ನಂತರ ಹಲವಾರು ಮಂದಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೇಗೆ ಮುಂದೆ ಸಾಗಬೇಕು ಹಾಗೂ ಮುಂದೆ ಬರುವ ಪತ್ರಕರ್ತರಿಗೆ ಹೇಗೆ ಮಾರ್ಗದರ್ಶನ ಮಾಡಬೇಕು ಎಂಬ ಬಗ್ಗೆ ಗಂಭೀರ ಚಿಂತನೆ ಆಗಬೇಕು ಎಂದು ಹೇಳಿದರು.

ಮೈಸೂರು ದಿಗಂತ ಪತ್ರಿಕೆ ಸಂಪಾದಕ ಮಳಲಿ ನಟರಾಜ್ ಕುವಾರ್ ಅವರ ಪುತ್ರ ಘನವಂತ, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಹಿರಿಯ ವರದಿಗಾರ ಕೆ.ಶಿವಕುಮಾರ್, ಮಾಧ್ಯಮ ಅಕಾಡೆಮಿ ಸದಸ್ಯರಾದ ಸಿ.ಕೆ.ಮಹೇಂದ್ರ, ಕೂಡ್ಲಿ ಗುರುರಾಜ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಉಪಾಧ್ಯಕ್ಷರಾದ ಎಂ.ಎಸ್. ಬಸವಣ್ಣ, ಧರ್ಮಾಪುರ ನಾರಾಯಣ್, ಕಾರ್ಯದರ್ಶಿಗಳಾದ ಪಿ.ರಂಗಸ್ವಾಮಿ, ಎಂ.ಮಹದೇವ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪತ್ರಕರ್ತರು ಹಾಜರಿದ್ದರು.


ಇತ್ತೀಚಿನ ವರ್ಷಗಳಲ್ಲಿ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದು ಪತ್ರಿಕಾ ಕಚೇರಿಗಳಿಗೆ ಕೆಲಸಕ್ಕಾಗಿ ಬರುವವರಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ವ್ಯಾಕರಣ ದೋಷವಿಲ್ಲದೆ ವಾಕ್ಯ ರಚನೆ ಮಾಡಲು ಬರುವುದಿಲ್ಲ. ಭಾಷಾ ಜ್ಞಾನವೂ ಇರುವುದಿಲ್ಲ. ಇಂತಹ ಪರಿಸ್ಥಿತಿಗೆ ಯಾರು ಹೊಣೆ ಎಂದು ನಾವೆಲ್ಲ ಪ್ರಶ್ನಿಸಿಕೊಳ್ಳುವ ಅಗತ್ಯವಿದೆ.

-ಅ.ಮ.ಸುರೇಶ್, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು


ಇಂದು ಟಿವಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿರುವ ಬಹುಪಾಲು ಮಂದಿಗೆ ಕನ್ನಡ ಭಾಷೆಯ ಮೇಲೆ ಹಿಡಿತವಿಲ್ಲ. ಹಾಗಾಗಿ ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡುವ ಮುಂಚೆ ಕನಿಷ್ಠ ಎರಡು ಮೂರು ವರ್ಷಗಳಾದರೂ ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡಬೇಕು. ಅವರ ಭಾಷೆ ಸುಧಾರಿಸಬೇಕಾದರೆ ಕನಿಷ್ಠ ನಾಲ್ಕು ವರ್ಷಗಳ ಕಾಲ ಪತ್ರಿಕಾ ಕಚೇರಿಯಲ್ಲಿ ಅನುಭವ ಪಡೆದಿರಬೇಕು. ಪ್ರಸ್ತುತ ದೃಶ್ಯ ಮಾಧ್ಯಮಗಳಲ್ಲಿ ಉನ್ನತ ಸ್ಥಾನದಲ್ಲಿರುವವರೆಲ್ಲರೂ ಮುದ್ರಣ ಮಾಧ್ಯಮದಿಂದಲೇ ಬಂದವರಾಗಿದ್ದಾರೆ. ಮುದ್ರಣ ಮಾಧ್ಯಮದಲ್ಲಿ ಪತ್ರಿಕೋದ್ಯಮದ ಅನುಭವವನ್ನು ಪಡೆದರೆ ಇನ್ನೂ ಉತ್ತಮ ಪತ್ರಕರ್ತರು ಹೊರಬರಲಿದ್ದಾರೆ.

-ಪ್ರತಾಪ್ ಸಿಂಹ, ಸಂಸದ

andolanait

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago