ಜಿಲ್ಲೆಗಳು

ಸಿದ್ದು ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಬಿಜೆಪಿ ಬಯಲಿಗೆಳೆಯಲಿ : ಧ್ರುವ ಸವಾಲು

ಹನೂರು: ನಿಮಗೆ ಧೈರ್ಯವಿದ್ದರೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಾಗಿದ್ದರೆ ಅದನ್ನು ಬಯಲಿಗೆಳೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸರ್ಕಾರಕ್ಕೆ ಸವಾಲೆಸೆದರು.
ಹನೂರು ಪಟ್ಟಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬಿಜೆಪಿ ಭ್ರಷ್ಟ ಸರ್ಕಾರ ಪ್ರತಿಯೊಂದು ಕಾಮಗಾರಿಗೆ 40%ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ದೂರು ನೀಡಿದ್ದಾರೆ . ಇದಲ್ಲದೆ ಪತ್ರಿಕಾಗೋಷ್ಠಿ ಕರೆದು ನೇರವಾಗಿ ಆರೋಪ ಮಾಡಿದ್ದಾರೆ. ಕೆಂಪಣ್ಣ ಯಾವ ರಾಜಕೀಯ ಪಕ್ಷಕ್ಕೂ ಸೇರಿದವರಲ್ಲ,ಇದಲ್ಲದೆ ಪಿಎಸ್ಸೈ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಜೈಲಿನಲ್ಲಿದ್ದಾರೆ,ಪ್ರಾಧ್ಯಾಪಕರ ಆಯ್ಕೆಯಲ್ಲಿ ಕುಲಪತಿಗಳು ಜೈಲಿನಲ್ಲಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸಂಸದ ಪ್ರತಾಪ್ ಸಿಂಹ ರವರು ಭ್ರಮಾ ಲೋಕದಲ್ಲಿದ್ದಾರೆ. ಬಿಜೆಪಿ ಪಕ್ಷದವರು ಅಭಿವೃದ್ಧಿಯ ಬಗ್ಗೆ ಬೆಳಕು ಚೆಲ್ಲುತ್ತಿಲ್ಲ, ಅವರು ನೀಡಿರುವ ಹೊಸ ಯೋಜನೆಗಳ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3ವರ್ಷವಾಗಿದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 8 ವರ್ಷವಾಗಿದೆ ಜನಸಾಮಾನ್ಯರಿಗೆ ಯಾವುದೇ ಉತ್ತಮ ಕಾರ್ಯಕ್ರಮ ನೀಡಿಲ್ಲ ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಕೇವಲ ಧರ್ಮ ಆಧಾರಿತವಾಗಿ ಜನರ ಮನವೊಲಿಸುವಲ್ಲಿ ಸಂಚು ರೂಪಿಸಿದ್ದಾರೆ. ಸಚಿವರಾಗಿದ್ದ ಈಶ್ವರಪ್ಪ ಹಾಗೂ ಅಬಕಾರಿ ಸಚಿವರಾಗಿದ್ದ ರಾಜೇಶ್ ಅವರು ಭ್ರಷ್ಟಾಚಾರ ಆರೋಪದಡಿ ರಾಜಿನಾಮೆ ನೀಡಿದ್ದಾರೆ.ಒಟ್ಟಾರೆ ಹಿಂದೆಂದೂ ಕಾಣದ ರೀತಿಯಲ್ಲಿ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಬಿಜೆಪಿಯವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago