ಜಿಲ್ಲೆಗಳು

ಸಿದ್ದು ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಬಿಜೆಪಿ ಬಯಲಿಗೆಳೆಯಲಿ : ಧ್ರುವ ಸವಾಲು

ಹನೂರು: ನಿಮಗೆ ಧೈರ್ಯವಿದ್ದರೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಾಗಿದ್ದರೆ ಅದನ್ನು ಬಯಲಿಗೆಳೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸರ್ಕಾರಕ್ಕೆ ಸವಾಲೆಸೆದರು.
ಹನೂರು ಪಟ್ಟಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬಿಜೆಪಿ ಭ್ರಷ್ಟ ಸರ್ಕಾರ ಪ್ರತಿಯೊಂದು ಕಾಮಗಾರಿಗೆ 40%ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ದೂರು ನೀಡಿದ್ದಾರೆ . ಇದಲ್ಲದೆ ಪತ್ರಿಕಾಗೋಷ್ಠಿ ಕರೆದು ನೇರವಾಗಿ ಆರೋಪ ಮಾಡಿದ್ದಾರೆ. ಕೆಂಪಣ್ಣ ಯಾವ ರಾಜಕೀಯ ಪಕ್ಷಕ್ಕೂ ಸೇರಿದವರಲ್ಲ,ಇದಲ್ಲದೆ ಪಿಎಸ್ಸೈ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಜೈಲಿನಲ್ಲಿದ್ದಾರೆ,ಪ್ರಾಧ್ಯಾಪಕರ ಆಯ್ಕೆಯಲ್ಲಿ ಕುಲಪತಿಗಳು ಜೈಲಿನಲ್ಲಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸಂಸದ ಪ್ರತಾಪ್ ಸಿಂಹ ರವರು ಭ್ರಮಾ ಲೋಕದಲ್ಲಿದ್ದಾರೆ. ಬಿಜೆಪಿ ಪಕ್ಷದವರು ಅಭಿವೃದ್ಧಿಯ ಬಗ್ಗೆ ಬೆಳಕು ಚೆಲ್ಲುತ್ತಿಲ್ಲ, ಅವರು ನೀಡಿರುವ ಹೊಸ ಯೋಜನೆಗಳ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3ವರ್ಷವಾಗಿದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 8 ವರ್ಷವಾಗಿದೆ ಜನಸಾಮಾನ್ಯರಿಗೆ ಯಾವುದೇ ಉತ್ತಮ ಕಾರ್ಯಕ್ರಮ ನೀಡಿಲ್ಲ ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಕೇವಲ ಧರ್ಮ ಆಧಾರಿತವಾಗಿ ಜನರ ಮನವೊಲಿಸುವಲ್ಲಿ ಸಂಚು ರೂಪಿಸಿದ್ದಾರೆ. ಸಚಿವರಾಗಿದ್ದ ಈಶ್ವರಪ್ಪ ಹಾಗೂ ಅಬಕಾರಿ ಸಚಿವರಾಗಿದ್ದ ರಾಜೇಶ್ ಅವರು ಭ್ರಷ್ಟಾಚಾರ ಆರೋಪದಡಿ ರಾಜಿನಾಮೆ ನೀಡಿದ್ದಾರೆ.ಒಟ್ಟಾರೆ ಹಿಂದೆಂದೂ ಕಾಣದ ರೀತಿಯಲ್ಲಿ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಬಿಜೆಪಿಯವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

4 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

4 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

5 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

5 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

6 hours ago