ಜಿಲ್ಲೆಗಳು

ಕೈ, ತೆನೆ ಪಕ್ಷ ತೊರೆದು ಬಿಜೆಪಿಗೆ ಹಲವರ ಸೇರ್ಪಡೆ

ಮೈಸೂರು : ನಗರದ ಕಲ್ಯಾಣ ಗಿರಿಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಹಾಗೂ ಜೆಡಿಎಸ್  ಪಕ್ಷದ ಹಲವು ಕಾರ್ಯಕರ್ತರುಗಳಾದ ಸುಪ್ರೀತ್ ಶೆಟ್ಟಿ, ರವಿ, ಮಂಜುನಾಥ್, ಮಹೇಶ್, ಶೋಹೇಬ್, ಮತ್ತು ಬೆಂಬಲಿಗರು ಕಾಂಗ್ರೆಸ್ ಹಾಗೂ ಜೆಡಿಎಸ್ ಅನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಇದರ ಜೊತೆಗೆ ವಾರ್ಡ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇಮಕಾತಿ ಕಾರ್ಯಕ್ರಮವನ್ನೂ ಕೂಡ ಏರ್ಪಡಿಸಲಾಗಿತ್ತು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ನಗರ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ ರವರು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ಅತ್ಯಂತ ಕ್ರಿಯಾಶೀಲವಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಸಜ್ಜಾಗುತ್ತಿದ್ದಾರೆ ಅತ್ಯಂತ ಶ್ಲಾಘನೀಯ ಕಳೆದ ಬಾರಿ ಕರೋನ ಸಂದರ್ಭದಲ್ಲಿ ಮನೆ ಮನೆ ಬಾಗಿಲಿಗೆ ಬಡವರಿಗೆ ದಿನನಿತ್ಯ ಬಳಕೆಯ ದವಸ ಧಾನ್ಯಗಳು ಆಹಾರಗಳನ್ನು ಕೊಡುವ ಮುಖಾಂತರ ಶ್ರಮದಾನ ಮಾಡಿದರು ಇನ್ನು ಅನೇಕ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿಯೊಬ್ಬ ಯುವಕರನ್ನು ಪಕ್ಷಕ್ಕೆ ಸೇರ್ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು, ಮತ್ತು ಕೊರೋನ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವ್ಯಾಕ್ಸಿನ್ ಗಳನ್ನು ಉಚಿತವಾಗಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಅನುಕೂಲವಾಯಿತು, ಜೆಎಸ್ಎಸ್ ಸಂಸ್ಥೆ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ ಎನ್ ಆರ್ ಕ್ಷೇತ್ರದ ಚರ್ಚಿನ ಫಾದರ್ ರವರ ಸಹಾಯದೊಂದಿಗೆ ಕೊರೋನ ಸಂದರ್ಭದಲ್ಲಿ ಉಚಿತ ಆಹಾರವನ್ನು ಬಡವರಿಗೆ ಹಸಿವು ನೀಗಿಸಲು ಬಹಳ ಸಹಕರಿಸಿದರು, ಇಂತಹ ಬಗೆ ಬಗೆಯ ಸಾಮಾಜಿಕ ಕೆಲಸಗಳನ್ನು ಮಾಡುವುದರ ಜೊತೆಗೆ ಸರ್ಕಾರದ ಸವಲತ್ತುಗಳನ್ನು ಹಾಗೂ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು

ನಂತರ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಶ್ರೀ ಸಂದೇಶ ಸ್ವಾಮಿರವರು ಈ ಕ್ಷೇತ್ರದಲ್ಲಿ ಕಳೆದ 28 ವರ್ಷದಲ್ಲಿ ಯಾವುದೇ ಸಹ ಅಭಿವೃದ್ಧಿ ಯೋಜನೆ ಹಾಗಿಲ್ಲ, ಮೂಲಭೂತ ಸೌಕರ್ಯಗಳು ಯಾವುದೇ ಸಹ ಆಗಿಲ್ಲ, ಕ್ಷೇತ್ರದಲ್ಲಿ ಯಾವುದೇ ಸುಸಜ್ಜಿತವಾದಂತಹ ಆಸ್ಪತ್ರೆಗಳು ,ಕಾಲೇಜುಗಳು ,ಯಾವುದು ಸಹ ಇಲ್ಲ ಐದು ಕಿಲೋಮೀಟರ್ ಸಿಟಿ ಭಾಗಕ್ಕೆ ತೆರಳ ಬೇಕಾಗಿದೆ ಮೈಸೂರಿನ ಕೃಷ್ಣರಾಜ, ಚಾಮರಾಜ, ಕ್ಷೇತ್ರಗಳಲ್ಲಿ ಗುದ್ದಲಿ ಪೂಜೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ, ನರಸಿಂಹರಾಜ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ, ಆದ್ದರಿಂದ ಇಲ್ಲಿ ಜನರಿಗೂ ಯಾವುದೇ ಕೆಲಸಗಳು ಮಾಡುತ್ತಿಲ್ಲ ಹಾಗೂ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರಿಗೂ ಸಹ ಯಾವುದೇ ಕೆಲಸ ಕಾರ್ಯಗಳು ಆಗದೆ ಅವರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಮುಂದಿನ ಬಾರಿ ಚುನಾವಣೆಯಲ್ಲಿ ನರಸಿಂಹರಾಜ ಕ್ಷೇತ್ರ ಅದ್ದೂರಿಯಾಗಿ ಬಿಜೆಪಿ ಜಯಭೇರಿ ಆಗುವಂತೆ ಕೆಲಸ ಮಾಡೋಣ, ನಿಮ್ಮಂತಹ ಯುವ ಪಡೆ ಪ್ರತಿ ಬೂತಿನಿಂದ ಪಕ್ಷಕ್ಕೆ ದುಡಿಯುವಂತಾಗಲಿ, ಹಾಗೂ ಕೇಂದ್ರ ರಾಜ್ಯ ಸರ್ಕಾರಗಳು ಇರುವುದರಿಂದ ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಅಭಿವೃದ್ಧಿ ಆಗುತ್ತದೆ, ಬೆಂಗಳೂರು ಮೈಸೂರು ದಶಪಥ ಹೆದ್ದಾರಿ , ಬೃಹತ್ ಆಟದ ಕ್ರೀಡಾಂಗಣ, ಇನ್ನಿತರ ಮೈಸೂರಿಗೆ ಹಲವಾರು ಯೋಜನೆಗಳು ಬರುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಭಾನುಪ್ರಕಾಶ್, ರವರು ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಮೇಲು, ನಗರ ಯುವ ಮೋರ್ಚಾ ಅಧ್ಯಕ್ಷ ಎಂಜಿ ಕಿರಣ್ ಗೌಡ, ನಗರ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಜಯಶಂಕರ್, ನಗರ ಉಪಾಧ್ಯಕ್ಷರಾದ ಟಿ ರಮೇಶ್, ನಗರ ಪಾಲಿಕೆ ಸದಸ್ಯರಾದ ಆಶಾ ನಾಗಭೂಷಣ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್, ಹಾಗೂ ಉಪಾಧ್ಯಕ್ಷರಾದ ಕಾರ್ತಿಕ್, ಪುನೀತ್, ಮತ್ತು ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್, ನವೀನ್ ಶೆಟ್ಟಿ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸತೀಶ್, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ನಾರಾಯಣ ಲೋಲಪ್ಪ, ರೈತ ಮೋರ್ಚಾ ಅಧ್ಯಕ್ಷರಾದ ಶಶಿ, ವಿನೋದ್, ಬಸವರಾಜಪ್ಪ, ಶ್ರೀಕಂಠ ಮೂರ್ತಿ, ಸ್ವಾಮಿ, ರಜನಿಕಾಂತ್, ನಾಗರಾಜು, ಪುನೀತ್, ಆನಂದ್, ಜೀವನ್, ಮುಂತಾದವರು ಉಪಸ್ಥಿತರಿದ್ದರು.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

25 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

32 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

1 hour ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

2 hours ago