ಜಿಲ್ಲೆಗಳು

ಕೈ, ತೆನೆ ಪಕ್ಷ ತೊರೆದು ಬಿಜೆಪಿಗೆ ಹಲವರ ಸೇರ್ಪಡೆ

ಮೈಸೂರು : ನಗರದ ಕಲ್ಯಾಣ ಗಿರಿಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಹಾಗೂ ಜೆಡಿಎಸ್  ಪಕ್ಷದ ಹಲವು ಕಾರ್ಯಕರ್ತರುಗಳಾದ ಸುಪ್ರೀತ್ ಶೆಟ್ಟಿ, ರವಿ, ಮಂಜುನಾಥ್, ಮಹೇಶ್, ಶೋಹೇಬ್, ಮತ್ತು ಬೆಂಬಲಿಗರು ಕಾಂಗ್ರೆಸ್ ಹಾಗೂ ಜೆಡಿಎಸ್ ಅನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಇದರ ಜೊತೆಗೆ ವಾರ್ಡ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇಮಕಾತಿ ಕಾರ್ಯಕ್ರಮವನ್ನೂ ಕೂಡ ಏರ್ಪಡಿಸಲಾಗಿತ್ತು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ನಗರ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ ರವರು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ಅತ್ಯಂತ ಕ್ರಿಯಾಶೀಲವಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಸಜ್ಜಾಗುತ್ತಿದ್ದಾರೆ ಅತ್ಯಂತ ಶ್ಲಾಘನೀಯ ಕಳೆದ ಬಾರಿ ಕರೋನ ಸಂದರ್ಭದಲ್ಲಿ ಮನೆ ಮನೆ ಬಾಗಿಲಿಗೆ ಬಡವರಿಗೆ ದಿನನಿತ್ಯ ಬಳಕೆಯ ದವಸ ಧಾನ್ಯಗಳು ಆಹಾರಗಳನ್ನು ಕೊಡುವ ಮುಖಾಂತರ ಶ್ರಮದಾನ ಮಾಡಿದರು ಇನ್ನು ಅನೇಕ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿಯೊಬ್ಬ ಯುವಕರನ್ನು ಪಕ್ಷಕ್ಕೆ ಸೇರ್ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು, ಮತ್ತು ಕೊರೋನ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವ್ಯಾಕ್ಸಿನ್ ಗಳನ್ನು ಉಚಿತವಾಗಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಅನುಕೂಲವಾಯಿತು, ಜೆಎಸ್ಎಸ್ ಸಂಸ್ಥೆ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ ಎನ್ ಆರ್ ಕ್ಷೇತ್ರದ ಚರ್ಚಿನ ಫಾದರ್ ರವರ ಸಹಾಯದೊಂದಿಗೆ ಕೊರೋನ ಸಂದರ್ಭದಲ್ಲಿ ಉಚಿತ ಆಹಾರವನ್ನು ಬಡವರಿಗೆ ಹಸಿವು ನೀಗಿಸಲು ಬಹಳ ಸಹಕರಿಸಿದರು, ಇಂತಹ ಬಗೆ ಬಗೆಯ ಸಾಮಾಜಿಕ ಕೆಲಸಗಳನ್ನು ಮಾಡುವುದರ ಜೊತೆಗೆ ಸರ್ಕಾರದ ಸವಲತ್ತುಗಳನ್ನು ಹಾಗೂ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು

ನಂತರ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಶ್ರೀ ಸಂದೇಶ ಸ್ವಾಮಿರವರು ಈ ಕ್ಷೇತ್ರದಲ್ಲಿ ಕಳೆದ 28 ವರ್ಷದಲ್ಲಿ ಯಾವುದೇ ಸಹ ಅಭಿವೃದ್ಧಿ ಯೋಜನೆ ಹಾಗಿಲ್ಲ, ಮೂಲಭೂತ ಸೌಕರ್ಯಗಳು ಯಾವುದೇ ಸಹ ಆಗಿಲ್ಲ, ಕ್ಷೇತ್ರದಲ್ಲಿ ಯಾವುದೇ ಸುಸಜ್ಜಿತವಾದಂತಹ ಆಸ್ಪತ್ರೆಗಳು ,ಕಾಲೇಜುಗಳು ,ಯಾವುದು ಸಹ ಇಲ್ಲ ಐದು ಕಿಲೋಮೀಟರ್ ಸಿಟಿ ಭಾಗಕ್ಕೆ ತೆರಳ ಬೇಕಾಗಿದೆ ಮೈಸೂರಿನ ಕೃಷ್ಣರಾಜ, ಚಾಮರಾಜ, ಕ್ಷೇತ್ರಗಳಲ್ಲಿ ಗುದ್ದಲಿ ಪೂಜೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ, ನರಸಿಂಹರಾಜ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ, ಆದ್ದರಿಂದ ಇಲ್ಲಿ ಜನರಿಗೂ ಯಾವುದೇ ಕೆಲಸಗಳು ಮಾಡುತ್ತಿಲ್ಲ ಹಾಗೂ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರಿಗೂ ಸಹ ಯಾವುದೇ ಕೆಲಸ ಕಾರ್ಯಗಳು ಆಗದೆ ಅವರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಮುಂದಿನ ಬಾರಿ ಚುನಾವಣೆಯಲ್ಲಿ ನರಸಿಂಹರಾಜ ಕ್ಷೇತ್ರ ಅದ್ದೂರಿಯಾಗಿ ಬಿಜೆಪಿ ಜಯಭೇರಿ ಆಗುವಂತೆ ಕೆಲಸ ಮಾಡೋಣ, ನಿಮ್ಮಂತಹ ಯುವ ಪಡೆ ಪ್ರತಿ ಬೂತಿನಿಂದ ಪಕ್ಷಕ್ಕೆ ದುಡಿಯುವಂತಾಗಲಿ, ಹಾಗೂ ಕೇಂದ್ರ ರಾಜ್ಯ ಸರ್ಕಾರಗಳು ಇರುವುದರಿಂದ ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಅಭಿವೃದ್ಧಿ ಆಗುತ್ತದೆ, ಬೆಂಗಳೂರು ಮೈಸೂರು ದಶಪಥ ಹೆದ್ದಾರಿ , ಬೃಹತ್ ಆಟದ ಕ್ರೀಡಾಂಗಣ, ಇನ್ನಿತರ ಮೈಸೂರಿಗೆ ಹಲವಾರು ಯೋಜನೆಗಳು ಬರುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಭಾನುಪ್ರಕಾಶ್, ರವರು ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಮೇಲು, ನಗರ ಯುವ ಮೋರ್ಚಾ ಅಧ್ಯಕ್ಷ ಎಂಜಿ ಕಿರಣ್ ಗೌಡ, ನಗರ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಜಯಶಂಕರ್, ನಗರ ಉಪಾಧ್ಯಕ್ಷರಾದ ಟಿ ರಮೇಶ್, ನಗರ ಪಾಲಿಕೆ ಸದಸ್ಯರಾದ ಆಶಾ ನಾಗಭೂಷಣ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್, ಹಾಗೂ ಉಪಾಧ್ಯಕ್ಷರಾದ ಕಾರ್ತಿಕ್, ಪುನೀತ್, ಮತ್ತು ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್, ನವೀನ್ ಶೆಟ್ಟಿ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸತೀಶ್, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ನಾರಾಯಣ ಲೋಲಪ್ಪ, ರೈತ ಮೋರ್ಚಾ ಅಧ್ಯಕ್ಷರಾದ ಶಶಿ, ವಿನೋದ್, ಬಸವರಾಜಪ್ಪ, ಶ್ರೀಕಂಠ ಮೂರ್ತಿ, ಸ್ವಾಮಿ, ರಜನಿಕಾಂತ್, ನಾಗರಾಜು, ಪುನೀತ್, ಆನಂದ್, ಜೀವನ್, ಮುಂತಾದವರು ಉಪಸ್ಥಿತರಿದ್ದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

49 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago