ಜಿಲ್ಲೆಗಳು

ಕೈ, ತೆನೆ ಪಕ್ಷ ತೊರೆದು ಬಿಜೆಪಿಗೆ ಹಲವರ ಸೇರ್ಪಡೆ

ಮೈಸೂರು : ನಗರದ ಕಲ್ಯಾಣ ಗಿರಿಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಹಾಗೂ ಜೆಡಿಎಸ್  ಪಕ್ಷದ ಹಲವು ಕಾರ್ಯಕರ್ತರುಗಳಾದ ಸುಪ್ರೀತ್ ಶೆಟ್ಟಿ, ರವಿ, ಮಂಜುನಾಥ್, ಮಹೇಶ್, ಶೋಹೇಬ್, ಮತ್ತು ಬೆಂಬಲಿಗರು ಕಾಂಗ್ರೆಸ್ ಹಾಗೂ ಜೆಡಿಎಸ್ ಅನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಇದರ ಜೊತೆಗೆ ವಾರ್ಡ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇಮಕಾತಿ ಕಾರ್ಯಕ್ರಮವನ್ನೂ ಕೂಡ ಏರ್ಪಡಿಸಲಾಗಿತ್ತು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ನಗರ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ ರವರು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ಅತ್ಯಂತ ಕ್ರಿಯಾಶೀಲವಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಸಜ್ಜಾಗುತ್ತಿದ್ದಾರೆ ಅತ್ಯಂತ ಶ್ಲಾಘನೀಯ ಕಳೆದ ಬಾರಿ ಕರೋನ ಸಂದರ್ಭದಲ್ಲಿ ಮನೆ ಮನೆ ಬಾಗಿಲಿಗೆ ಬಡವರಿಗೆ ದಿನನಿತ್ಯ ಬಳಕೆಯ ದವಸ ಧಾನ್ಯಗಳು ಆಹಾರಗಳನ್ನು ಕೊಡುವ ಮುಖಾಂತರ ಶ್ರಮದಾನ ಮಾಡಿದರು ಇನ್ನು ಅನೇಕ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿಯೊಬ್ಬ ಯುವಕರನ್ನು ಪಕ್ಷಕ್ಕೆ ಸೇರ್ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು, ಮತ್ತು ಕೊರೋನ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವ್ಯಾಕ್ಸಿನ್ ಗಳನ್ನು ಉಚಿತವಾಗಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಅನುಕೂಲವಾಯಿತು, ಜೆಎಸ್ಎಸ್ ಸಂಸ್ಥೆ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ ಎನ್ ಆರ್ ಕ್ಷೇತ್ರದ ಚರ್ಚಿನ ಫಾದರ್ ರವರ ಸಹಾಯದೊಂದಿಗೆ ಕೊರೋನ ಸಂದರ್ಭದಲ್ಲಿ ಉಚಿತ ಆಹಾರವನ್ನು ಬಡವರಿಗೆ ಹಸಿವು ನೀಗಿಸಲು ಬಹಳ ಸಹಕರಿಸಿದರು, ಇಂತಹ ಬಗೆ ಬಗೆಯ ಸಾಮಾಜಿಕ ಕೆಲಸಗಳನ್ನು ಮಾಡುವುದರ ಜೊತೆಗೆ ಸರ್ಕಾರದ ಸವಲತ್ತುಗಳನ್ನು ಹಾಗೂ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು

ನಂತರ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಶ್ರೀ ಸಂದೇಶ ಸ್ವಾಮಿರವರು ಈ ಕ್ಷೇತ್ರದಲ್ಲಿ ಕಳೆದ 28 ವರ್ಷದಲ್ಲಿ ಯಾವುದೇ ಸಹ ಅಭಿವೃದ್ಧಿ ಯೋಜನೆ ಹಾಗಿಲ್ಲ, ಮೂಲಭೂತ ಸೌಕರ್ಯಗಳು ಯಾವುದೇ ಸಹ ಆಗಿಲ್ಲ, ಕ್ಷೇತ್ರದಲ್ಲಿ ಯಾವುದೇ ಸುಸಜ್ಜಿತವಾದಂತಹ ಆಸ್ಪತ್ರೆಗಳು ,ಕಾಲೇಜುಗಳು ,ಯಾವುದು ಸಹ ಇಲ್ಲ ಐದು ಕಿಲೋಮೀಟರ್ ಸಿಟಿ ಭಾಗಕ್ಕೆ ತೆರಳ ಬೇಕಾಗಿದೆ ಮೈಸೂರಿನ ಕೃಷ್ಣರಾಜ, ಚಾಮರಾಜ, ಕ್ಷೇತ್ರಗಳಲ್ಲಿ ಗುದ್ದಲಿ ಪೂಜೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ, ನರಸಿಂಹರಾಜ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ, ಆದ್ದರಿಂದ ಇಲ್ಲಿ ಜನರಿಗೂ ಯಾವುದೇ ಕೆಲಸಗಳು ಮಾಡುತ್ತಿಲ್ಲ ಹಾಗೂ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರಿಗೂ ಸಹ ಯಾವುದೇ ಕೆಲಸ ಕಾರ್ಯಗಳು ಆಗದೆ ಅವರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಮುಂದಿನ ಬಾರಿ ಚುನಾವಣೆಯಲ್ಲಿ ನರಸಿಂಹರಾಜ ಕ್ಷೇತ್ರ ಅದ್ದೂರಿಯಾಗಿ ಬಿಜೆಪಿ ಜಯಭೇರಿ ಆಗುವಂತೆ ಕೆಲಸ ಮಾಡೋಣ, ನಿಮ್ಮಂತಹ ಯುವ ಪಡೆ ಪ್ರತಿ ಬೂತಿನಿಂದ ಪಕ್ಷಕ್ಕೆ ದುಡಿಯುವಂತಾಗಲಿ, ಹಾಗೂ ಕೇಂದ್ರ ರಾಜ್ಯ ಸರ್ಕಾರಗಳು ಇರುವುದರಿಂದ ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಅಭಿವೃದ್ಧಿ ಆಗುತ್ತದೆ, ಬೆಂಗಳೂರು ಮೈಸೂರು ದಶಪಥ ಹೆದ್ದಾರಿ , ಬೃಹತ್ ಆಟದ ಕ್ರೀಡಾಂಗಣ, ಇನ್ನಿತರ ಮೈಸೂರಿಗೆ ಹಲವಾರು ಯೋಜನೆಗಳು ಬರುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಭಾನುಪ್ರಕಾಶ್, ರವರು ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಮೇಲು, ನಗರ ಯುವ ಮೋರ್ಚಾ ಅಧ್ಯಕ್ಷ ಎಂಜಿ ಕಿರಣ್ ಗೌಡ, ನಗರ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಜಯಶಂಕರ್, ನಗರ ಉಪಾಧ್ಯಕ್ಷರಾದ ಟಿ ರಮೇಶ್, ನಗರ ಪಾಲಿಕೆ ಸದಸ್ಯರಾದ ಆಶಾ ನಾಗಭೂಷಣ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್, ಹಾಗೂ ಉಪಾಧ್ಯಕ್ಷರಾದ ಕಾರ್ತಿಕ್, ಪುನೀತ್, ಮತ್ತು ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್, ನವೀನ್ ಶೆಟ್ಟಿ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸತೀಶ್, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ನಾರಾಯಣ ಲೋಲಪ್ಪ, ರೈತ ಮೋರ್ಚಾ ಅಧ್ಯಕ್ಷರಾದ ಶಶಿ, ವಿನೋದ್, ಬಸವರಾಜಪ್ಪ, ಶ್ರೀಕಂಠ ಮೂರ್ತಿ, ಸ್ವಾಮಿ, ರಜನಿಕಾಂತ್, ನಾಗರಾಜು, ಪುನೀತ್, ಆನಂದ್, ಜೀವನ್, ಮುಂತಾದವರು ಉಪಸ್ಥಿತರಿದ್ದರು.

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

14 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago