ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜನ ಧ್ವನಿ ಬಿ ವೆಂಕಟೇಶ್ ಮಾತನಾಡಿ ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಮಾಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ತೆರೆದು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಅನುಕೂಲ ಕಲ್ಪಿಸಲಾಗಿತ್ತು. ಆಟಿಕೆಗಳು ಗೃಹಪಯೋಗಿ ವಸ್ತುಗಳು ಬ್ಯಾಗ್ ಸೇರಿದಂತೆ ವಿವಿಧ ಪದಾರ್ಥಗಳನ್ನು ತಯಾರಿಕೆ ಮಾಡುವುದನ್ನು ಕಲಿಕಾ ಕೇಂದ್ರದಲ್ಲಿ ಕಲಿತುಕೊಂಡು, ಆರ್ಥಿಕವಾಗಿ ಸಬಲರಾಗುತ್ತಿದ್ದರು ಇದರಿಂದ ಪ್ರೇರೇಪಿತರಾದ ಇತರ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ನಮ್ಮ ಕಾರ್ಯ ವೈಖರಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮೆಚ್ಚಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ ಸೇರಿದಂತೆ ಇನ್ನಿತರರು ಹಾಜರಿದ್ದರು
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…