ಜಿಲ್ಲೆಗಳು

ಕೈ ತೊರೆದು ಕಮಲಕ್ಕೆ ಜೈ ಎಂದ ಮಹಿಳಾ ಕಾರ್ಯಕರ್ತರು

ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜನ ಧ್ವನಿ ಬಿ ವೆಂಕಟೇಶ್ ಮಾತನಾಡಿ ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಮಾಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ತೆರೆದು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಅನುಕೂಲ ಕಲ್ಪಿಸಲಾಗಿತ್ತು. ಆಟಿಕೆಗಳು ಗೃಹಪಯೋಗಿ ವಸ್ತುಗಳು ಬ್ಯಾಗ್ ಸೇರಿದಂತೆ ವಿವಿಧ ಪದಾರ್ಥಗಳನ್ನು ತಯಾರಿಕೆ ಮಾಡುವುದನ್ನು ಕಲಿಕಾ ಕೇಂದ್ರದಲ್ಲಿ ಕಲಿತುಕೊಂಡು, ಆರ್ಥಿಕವಾಗಿ ಸಬಲರಾಗುತ್ತಿದ್ದರು ಇದರಿಂದ ಪ್ರೇರೇಪಿತರಾದ ಇತರ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ನಮ್ಮ ಕಾರ್ಯ ವೈಖರಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮೆಚ್ಚಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago