ಜಿಲ್ಲೆಗಳು

ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ: ಬಿ.ಸಿ. ನಾಗೇಶ್

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನದು ಬಾಸ್ ಇಸ್ ಆಲ್‌ವೇಸ್ ರೈಟ್ ಎಂಬ ಸಂಸ್ಕೃತಿ. ಬಾಸ್ ಎಂಬುದು ಇಲ್ಲಿ ಒಂದು ಕುಟುಂಬ ಅಷ್ಟೇ. ಕಾಂಗ್ರೆಸ್ ಒಡೆದು ಆಳುವ ನೀತಿಯಲ್ಲೆ ಬಂದಿರೋದು. ಇವರು ಬರಿ ಕಾಂಗ್ರೇಸ್ ಒಡೆಯಲ್ಲಿಲ್ಲ, ದೇಶವನ್ನೂ ಕೂಡ ಒಡೆದಿದ್ದಾರೆ. ಹಿರಿಯ ಮುಸಲ್ಮಾನ ನಾಯಕರು ಕಾಂಗ್ರೆಸ್ ಬಿಡುವ ಭಯದಿಂದ ಭಾರತ್ ಜೋಡೊ ಆರಂಭವಾಗಿದೆ. ಆ ಮೂಲಕ ಕಾಂಗ್ರೆಸ್ ನಾಟಕವಾಡುತ್ತಿದೆ ಎಂದು ಲೇವಡಿ ಮಾಡಿದರು.

ಭಾರತ್ ಜೋಡೊ ಬಿಜೆಪಿಗೆ ಭಯ ಹುಟ್ಟಿಸಿದೆ ಎಂಬ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ನಾಗೇಶ್, ಬಿ.ಕೆ ಹರಿಪ್ರಸಾದ್‌ಗೆ ಹೆಚ್ಚಿನ ಒತ್ತು ಕೊಡವ ಅವಶ್ಯಕತೆ ಇಲ್ಲ. ಅವರು ಚುನಾವಣೆ ಎದುರಿಸಿ ನಾಯಕರಾದವರಲ್ಲ. ಕಾಂಗ್ರೆಸ್‌ಗೆ ಈ ರೀತಿಯ ಪಾದಯಾತ್ರೆ ಹೊಸತು, ಬಿಜೆಪಿಗೆ ಅಲ್ಲ. ಬಿಜೆಪಿ ಪಕ್ಷ ಸ್ಥಾಪನೆಯಾಗಿದ್ದೆ ಜನರ ಸಮಸ್ಯೆ ಬಗೆಹರಿಸುವ ಮೂಲಕ. ಬಿಜೆಪಿ ಈ ರೀತಿಯ ಸಾಕಷ್ಟು ಅಭಿಯಾನಗಳನ್ನು ಮಾಡಿದೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ ಹಿಂದೆ ಸಾಕಷ್ಟು ಪಾದಯಾತ್ರೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಕಾಂಗ್ರೆಸ್ ಮಾಡುತ್ತಿದ್ದಾರೆ ಎಂದು ನಾವು ಪಾದಯಾತ್ರೆ ಮಾಡುತ್ತಿಲ್ಲ. ಕಾಂಗ್ರೆಸಿಗರೆ ನಮ್ಮನ್ನು ಕಾಪಿ ಮಾಡುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ ನಡೆದ ಭಾರತ್ ಜೋಡೊದಲ್ಲಿ ೫ ಕಿ.ಮೀ. ಕೂಡ ನಡೆಯಲು ಕಾಂಗ್ರೆಸಿಗರಿಗೆ ಆಗಲಿಲ್ಲ. ವಾಲ್ಮೀಕಿ ಜಯಂತಿಯಂದು ರಾಹುಲ್ ಗಾಂಧಿ ವಾಲ್ಮೀಕಿಗೆ ಅಪಮಾನ ಮಾಡಿದ್ದಾರೆ. ವಾಲ್ಮೀಕಿಯ ಫೋಟೊ ಇದ್ದ ಸ್ಟೇಜ್ ಕಡೆಗೂ ಕಾಂಗ್ರೇಸ್ ನಾಯಕರು ಸುಳಿಯದಿರೋದು ದುರಾದೃಷ್ಟ. ಓಟಿಗಾಗಿ ಇವರು ಭಾರತ್ ಜೋಡೊ ಮೂಲಕ ನಾಟಕವಾಡುತ್ತಿದ್ದಾರೆ. ದೇಶದ ಸಂಸ್ಕೃತಿಗೆ ಮರ್ಯಾದೆ ಕೊಡುವ ಕೆಲಸವನ್ನ ಅವರು ಕಲಿತೆ ಇಲ್ಲ. ಭಾರತ್ ಜೋಡೊದಲ್ಲಿ ಆರ್‌ಎಸ್‌ಎಸ್ ಬಗ್ಗೆ ಸಾರ್ವಕರ್ ಬಗ್ಗೆ ಮಾತನಾಡೋಕೆ ಏನಿದೆ? ಮುಸಲ್ಮಾನ ಓಟಿಗಾಗಿ ಕಾಂಗ್ರೆಸಿಗರು ಈ ರೀತಿ ಮಾಡುತ್ತಿದ್ದಾರೆ. ಜನರು ಕೊನೆಯದಾಗಿ ಭಾರತ್ ಚೋಡೊ ದಿನವನ್ನು ನೀಡುತ್ತಾರೆ ಎಂದು ಲೇವಡಿ ಮಾಡಿದರು.

andolana

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

4 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

4 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

4 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

13 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago