ಜಿಲ್ಲೆಗಳು

ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ: ಬಿ.ಸಿ. ನಾಗೇಶ್

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನದು ಬಾಸ್ ಇಸ್ ಆಲ್‌ವೇಸ್ ರೈಟ್ ಎಂಬ ಸಂಸ್ಕೃತಿ. ಬಾಸ್ ಎಂಬುದು ಇಲ್ಲಿ ಒಂದು ಕುಟುಂಬ ಅಷ್ಟೇ. ಕಾಂಗ್ರೆಸ್ ಒಡೆದು ಆಳುವ ನೀತಿಯಲ್ಲೆ ಬಂದಿರೋದು. ಇವರು ಬರಿ ಕಾಂಗ್ರೇಸ್ ಒಡೆಯಲ್ಲಿಲ್ಲ, ದೇಶವನ್ನೂ ಕೂಡ ಒಡೆದಿದ್ದಾರೆ. ಹಿರಿಯ ಮುಸಲ್ಮಾನ ನಾಯಕರು ಕಾಂಗ್ರೆಸ್ ಬಿಡುವ ಭಯದಿಂದ ಭಾರತ್ ಜೋಡೊ ಆರಂಭವಾಗಿದೆ. ಆ ಮೂಲಕ ಕಾಂಗ್ರೆಸ್ ನಾಟಕವಾಡುತ್ತಿದೆ ಎಂದು ಲೇವಡಿ ಮಾಡಿದರು.

ಭಾರತ್ ಜೋಡೊ ಬಿಜೆಪಿಗೆ ಭಯ ಹುಟ್ಟಿಸಿದೆ ಎಂಬ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ನಾಗೇಶ್, ಬಿ.ಕೆ ಹರಿಪ್ರಸಾದ್‌ಗೆ ಹೆಚ್ಚಿನ ಒತ್ತು ಕೊಡವ ಅವಶ್ಯಕತೆ ಇಲ್ಲ. ಅವರು ಚುನಾವಣೆ ಎದುರಿಸಿ ನಾಯಕರಾದವರಲ್ಲ. ಕಾಂಗ್ರೆಸ್‌ಗೆ ಈ ರೀತಿಯ ಪಾದಯಾತ್ರೆ ಹೊಸತು, ಬಿಜೆಪಿಗೆ ಅಲ್ಲ. ಬಿಜೆಪಿ ಪಕ್ಷ ಸ್ಥಾಪನೆಯಾಗಿದ್ದೆ ಜನರ ಸಮಸ್ಯೆ ಬಗೆಹರಿಸುವ ಮೂಲಕ. ಬಿಜೆಪಿ ಈ ರೀತಿಯ ಸಾಕಷ್ಟು ಅಭಿಯಾನಗಳನ್ನು ಮಾಡಿದೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ ಹಿಂದೆ ಸಾಕಷ್ಟು ಪಾದಯಾತ್ರೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಕಾಂಗ್ರೆಸ್ ಮಾಡುತ್ತಿದ್ದಾರೆ ಎಂದು ನಾವು ಪಾದಯಾತ್ರೆ ಮಾಡುತ್ತಿಲ್ಲ. ಕಾಂಗ್ರೆಸಿಗರೆ ನಮ್ಮನ್ನು ಕಾಪಿ ಮಾಡುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ ನಡೆದ ಭಾರತ್ ಜೋಡೊದಲ್ಲಿ ೫ ಕಿ.ಮೀ. ಕೂಡ ನಡೆಯಲು ಕಾಂಗ್ರೆಸಿಗರಿಗೆ ಆಗಲಿಲ್ಲ. ವಾಲ್ಮೀಕಿ ಜಯಂತಿಯಂದು ರಾಹುಲ್ ಗಾಂಧಿ ವಾಲ್ಮೀಕಿಗೆ ಅಪಮಾನ ಮಾಡಿದ್ದಾರೆ. ವಾಲ್ಮೀಕಿಯ ಫೋಟೊ ಇದ್ದ ಸ್ಟೇಜ್ ಕಡೆಗೂ ಕಾಂಗ್ರೇಸ್ ನಾಯಕರು ಸುಳಿಯದಿರೋದು ದುರಾದೃಷ್ಟ. ಓಟಿಗಾಗಿ ಇವರು ಭಾರತ್ ಜೋಡೊ ಮೂಲಕ ನಾಟಕವಾಡುತ್ತಿದ್ದಾರೆ. ದೇಶದ ಸಂಸ್ಕೃತಿಗೆ ಮರ್ಯಾದೆ ಕೊಡುವ ಕೆಲಸವನ್ನ ಅವರು ಕಲಿತೆ ಇಲ್ಲ. ಭಾರತ್ ಜೋಡೊದಲ್ಲಿ ಆರ್‌ಎಸ್‌ಎಸ್ ಬಗ್ಗೆ ಸಾರ್ವಕರ್ ಬಗ್ಗೆ ಮಾತನಾಡೋಕೆ ಏನಿದೆ? ಮುಸಲ್ಮಾನ ಓಟಿಗಾಗಿ ಕಾಂಗ್ರೆಸಿಗರು ಈ ರೀತಿ ಮಾಡುತ್ತಿದ್ದಾರೆ. ಜನರು ಕೊನೆಯದಾಗಿ ಭಾರತ್ ಚೋಡೊ ದಿನವನ್ನು ನೀಡುತ್ತಾರೆ ಎಂದು ಲೇವಡಿ ಮಾಡಿದರು.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

12 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago