ಜಿಲ್ಲೆಗಳು

ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ: ಬಿ.ಸಿ. ನಾಗೇಶ್

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನದು ಬಾಸ್ ಇಸ್ ಆಲ್‌ವೇಸ್ ರೈಟ್ ಎಂಬ ಸಂಸ್ಕೃತಿ. ಬಾಸ್ ಎಂಬುದು ಇಲ್ಲಿ ಒಂದು ಕುಟುಂಬ ಅಷ್ಟೇ. ಕಾಂಗ್ರೆಸ್ ಒಡೆದು ಆಳುವ ನೀತಿಯಲ್ಲೆ ಬಂದಿರೋದು. ಇವರು ಬರಿ ಕಾಂಗ್ರೇಸ್ ಒಡೆಯಲ್ಲಿಲ್ಲ, ದೇಶವನ್ನೂ ಕೂಡ ಒಡೆದಿದ್ದಾರೆ. ಹಿರಿಯ ಮುಸಲ್ಮಾನ ನಾಯಕರು ಕಾಂಗ್ರೆಸ್ ಬಿಡುವ ಭಯದಿಂದ ಭಾರತ್ ಜೋಡೊ ಆರಂಭವಾಗಿದೆ. ಆ ಮೂಲಕ ಕಾಂಗ್ರೆಸ್ ನಾಟಕವಾಡುತ್ತಿದೆ ಎಂದು ಲೇವಡಿ ಮಾಡಿದರು.

ಭಾರತ್ ಜೋಡೊ ಬಿಜೆಪಿಗೆ ಭಯ ಹುಟ್ಟಿಸಿದೆ ಎಂಬ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ನಾಗೇಶ್, ಬಿ.ಕೆ ಹರಿಪ್ರಸಾದ್‌ಗೆ ಹೆಚ್ಚಿನ ಒತ್ತು ಕೊಡವ ಅವಶ್ಯಕತೆ ಇಲ್ಲ. ಅವರು ಚುನಾವಣೆ ಎದುರಿಸಿ ನಾಯಕರಾದವರಲ್ಲ. ಕಾಂಗ್ರೆಸ್‌ಗೆ ಈ ರೀತಿಯ ಪಾದಯಾತ್ರೆ ಹೊಸತು, ಬಿಜೆಪಿಗೆ ಅಲ್ಲ. ಬಿಜೆಪಿ ಪಕ್ಷ ಸ್ಥಾಪನೆಯಾಗಿದ್ದೆ ಜನರ ಸಮಸ್ಯೆ ಬಗೆಹರಿಸುವ ಮೂಲಕ. ಬಿಜೆಪಿ ಈ ರೀತಿಯ ಸಾಕಷ್ಟು ಅಭಿಯಾನಗಳನ್ನು ಮಾಡಿದೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ ಹಿಂದೆ ಸಾಕಷ್ಟು ಪಾದಯಾತ್ರೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಕಾಂಗ್ರೆಸ್ ಮಾಡುತ್ತಿದ್ದಾರೆ ಎಂದು ನಾವು ಪಾದಯಾತ್ರೆ ಮಾಡುತ್ತಿಲ್ಲ. ಕಾಂಗ್ರೆಸಿಗರೆ ನಮ್ಮನ್ನು ಕಾಪಿ ಮಾಡುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ ನಡೆದ ಭಾರತ್ ಜೋಡೊದಲ್ಲಿ ೫ ಕಿ.ಮೀ. ಕೂಡ ನಡೆಯಲು ಕಾಂಗ್ರೆಸಿಗರಿಗೆ ಆಗಲಿಲ್ಲ. ವಾಲ್ಮೀಕಿ ಜಯಂತಿಯಂದು ರಾಹುಲ್ ಗಾಂಧಿ ವಾಲ್ಮೀಕಿಗೆ ಅಪಮಾನ ಮಾಡಿದ್ದಾರೆ. ವಾಲ್ಮೀಕಿಯ ಫೋಟೊ ಇದ್ದ ಸ್ಟೇಜ್ ಕಡೆಗೂ ಕಾಂಗ್ರೇಸ್ ನಾಯಕರು ಸುಳಿಯದಿರೋದು ದುರಾದೃಷ್ಟ. ಓಟಿಗಾಗಿ ಇವರು ಭಾರತ್ ಜೋಡೊ ಮೂಲಕ ನಾಟಕವಾಡುತ್ತಿದ್ದಾರೆ. ದೇಶದ ಸಂಸ್ಕೃತಿಗೆ ಮರ್ಯಾದೆ ಕೊಡುವ ಕೆಲಸವನ್ನ ಅವರು ಕಲಿತೆ ಇಲ್ಲ. ಭಾರತ್ ಜೋಡೊದಲ್ಲಿ ಆರ್‌ಎಸ್‌ಎಸ್ ಬಗ್ಗೆ ಸಾರ್ವಕರ್ ಬಗ್ಗೆ ಮಾತನಾಡೋಕೆ ಏನಿದೆ? ಮುಸಲ್ಮಾನ ಓಟಿಗಾಗಿ ಕಾಂಗ್ರೆಸಿಗರು ಈ ರೀತಿ ಮಾಡುತ್ತಿದ್ದಾರೆ. ಜನರು ಕೊನೆಯದಾಗಿ ಭಾರತ್ ಚೋಡೊ ದಿನವನ್ನು ನೀಡುತ್ತಾರೆ ಎಂದು ಲೇವಡಿ ಮಾಡಿದರು.

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

12 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

15 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

15 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

16 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

16 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

18 hours ago