ಜಿಲ್ಲೆಗಳು

ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ: ಬಿ.ಸಿ. ನಾಗೇಶ್

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನದು ಬಾಸ್ ಇಸ್ ಆಲ್‌ವೇಸ್ ರೈಟ್ ಎಂಬ ಸಂಸ್ಕೃತಿ. ಬಾಸ್ ಎಂಬುದು ಇಲ್ಲಿ ಒಂದು ಕುಟುಂಬ ಅಷ್ಟೇ. ಕಾಂಗ್ರೆಸ್ ಒಡೆದು ಆಳುವ ನೀತಿಯಲ್ಲೆ ಬಂದಿರೋದು. ಇವರು ಬರಿ ಕಾಂಗ್ರೇಸ್ ಒಡೆಯಲ್ಲಿಲ್ಲ, ದೇಶವನ್ನೂ ಕೂಡ ಒಡೆದಿದ್ದಾರೆ. ಹಿರಿಯ ಮುಸಲ್ಮಾನ ನಾಯಕರು ಕಾಂಗ್ರೆಸ್ ಬಿಡುವ ಭಯದಿಂದ ಭಾರತ್ ಜೋಡೊ ಆರಂಭವಾಗಿದೆ. ಆ ಮೂಲಕ ಕಾಂಗ್ರೆಸ್ ನಾಟಕವಾಡುತ್ತಿದೆ ಎಂದು ಲೇವಡಿ ಮಾಡಿದರು.

ಭಾರತ್ ಜೋಡೊ ಬಿಜೆಪಿಗೆ ಭಯ ಹುಟ್ಟಿಸಿದೆ ಎಂಬ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ನಾಗೇಶ್, ಬಿ.ಕೆ ಹರಿಪ್ರಸಾದ್‌ಗೆ ಹೆಚ್ಚಿನ ಒತ್ತು ಕೊಡವ ಅವಶ್ಯಕತೆ ಇಲ್ಲ. ಅವರು ಚುನಾವಣೆ ಎದುರಿಸಿ ನಾಯಕರಾದವರಲ್ಲ. ಕಾಂಗ್ರೆಸ್‌ಗೆ ಈ ರೀತಿಯ ಪಾದಯಾತ್ರೆ ಹೊಸತು, ಬಿಜೆಪಿಗೆ ಅಲ್ಲ. ಬಿಜೆಪಿ ಪಕ್ಷ ಸ್ಥಾಪನೆಯಾಗಿದ್ದೆ ಜನರ ಸಮಸ್ಯೆ ಬಗೆಹರಿಸುವ ಮೂಲಕ. ಬಿಜೆಪಿ ಈ ರೀತಿಯ ಸಾಕಷ್ಟು ಅಭಿಯಾನಗಳನ್ನು ಮಾಡಿದೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ ಹಿಂದೆ ಸಾಕಷ್ಟು ಪಾದಯಾತ್ರೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಕಾಂಗ್ರೆಸ್ ಮಾಡುತ್ತಿದ್ದಾರೆ ಎಂದು ನಾವು ಪಾದಯಾತ್ರೆ ಮಾಡುತ್ತಿಲ್ಲ. ಕಾಂಗ್ರೆಸಿಗರೆ ನಮ್ಮನ್ನು ಕಾಪಿ ಮಾಡುತ್ತಿದ್ದಾರೆ ಎಂದರು.

ತುಮಕೂರಿನಲ್ಲಿ ನಡೆದ ಭಾರತ್ ಜೋಡೊದಲ್ಲಿ ೫ ಕಿ.ಮೀ. ಕೂಡ ನಡೆಯಲು ಕಾಂಗ್ರೆಸಿಗರಿಗೆ ಆಗಲಿಲ್ಲ. ವಾಲ್ಮೀಕಿ ಜಯಂತಿಯಂದು ರಾಹುಲ್ ಗಾಂಧಿ ವಾಲ್ಮೀಕಿಗೆ ಅಪಮಾನ ಮಾಡಿದ್ದಾರೆ. ವಾಲ್ಮೀಕಿಯ ಫೋಟೊ ಇದ್ದ ಸ್ಟೇಜ್ ಕಡೆಗೂ ಕಾಂಗ್ರೇಸ್ ನಾಯಕರು ಸುಳಿಯದಿರೋದು ದುರಾದೃಷ್ಟ. ಓಟಿಗಾಗಿ ಇವರು ಭಾರತ್ ಜೋಡೊ ಮೂಲಕ ನಾಟಕವಾಡುತ್ತಿದ್ದಾರೆ. ದೇಶದ ಸಂಸ್ಕೃತಿಗೆ ಮರ್ಯಾದೆ ಕೊಡುವ ಕೆಲಸವನ್ನ ಅವರು ಕಲಿತೆ ಇಲ್ಲ. ಭಾರತ್ ಜೋಡೊದಲ್ಲಿ ಆರ್‌ಎಸ್‌ಎಸ್ ಬಗ್ಗೆ ಸಾರ್ವಕರ್ ಬಗ್ಗೆ ಮಾತನಾಡೋಕೆ ಏನಿದೆ? ಮುಸಲ್ಮಾನ ಓಟಿಗಾಗಿ ಕಾಂಗ್ರೆಸಿಗರು ಈ ರೀತಿ ಮಾಡುತ್ತಿದ್ದಾರೆ. ಜನರು ಕೊನೆಯದಾಗಿ ಭಾರತ್ ಚೋಡೊ ದಿನವನ್ನು ನೀಡುತ್ತಾರೆ ಎಂದು ಲೇವಡಿ ಮಾಡಿದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago