ಜಿಲ್ಲೆಗಳು

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ

ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿರವರ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಆರ್ಥಿಕ ನೀತಿಯಿಂದ ಭಾರತ ಇಂದು ಸುಭದ್ರವಾದ ನೆಲೆಗಟ್ಟಿನಲ್ಲಿ ನಿಂತಿದೆ. ಪ್ರಜಾಪ್ರಭುತ್ವ, ಸಂವಿಧಾನ ಗಟ್ಟಿಯಾಗಿ ನಿಂತಿರಲು ಹಾಗೂ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸುಭದ್ರವಾಗಿದೆ. ಉಳುವವನೇ ಭೂಮಿ ಒಡೆಯ ಕಾಯ್ದೆ ತಂದ ನಂತರ ಲಕ್ಷಾಂತರ ರೈತರು ತಮ್ಮ ಜೀವನ ಕಂಡುಕೊಂಡಿದ್ದಾರೆ. ಹಿಂದೆ ಕೇವಲ ಉಳ್ಳವರಿಗಷ್ಟೇ ಬ್ಯಾಂಕ್ ನಲ್ಲಿ ವ್ಯವಹಾರ ನಡೆಸುವ ಪದ್ದತಿ ಇತ್ತು ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ನಂತರ ಎಲ್ಲರಿಗೂ ವ್ಯವಹಾರಿಕವಾಗಿ ಬ್ಯಾಂಕ್ ನಲ್ಲಿ ಅನುಕೂಲವಾಗಿದೆ.ಸಾಮಾಜಿಕ ನ್ಯಾಯದಡಿ ಜೀತಪದ್ಧತಿ ಹೋಗಲಾಡಿಸಿದ ನಂತರ ಲಕ್ಷಾಂತರ ಜನರು ಸ್ವತಂತ್ರ ಬದುಕು ಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಂತಸ ತಂದಿದೆ: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆರವರು ಆಯ್ಕೆಯಾಗಿರುವುದು ತುಂಬಾ ಸಂತಸದ ವಿಚಾರವಾಗಿದೆ.ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಇಂತಹ ದೊಡ್ಡ ಕಾಂಗ್ರೆಸ್ ಪಕ್ಷಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷರಾಗಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಇವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾವು ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹನೂರು ಪಟ್ಟಣದ ನಿವಾಸಿ ಪ್ರಭು ಜೆಡಿಎಸ್ ತೊರೆದು ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಸೊಳೇರಿಪಾಳ್ಯ ಗ್ರಾಪಂ ಅಧ್ಯಕ್ಷೆ ಸುಧಾ, ಸದಸ್ಯ ಬಸವರಾಜು ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಪತ್ ಕುಮಾರ್ ಸುದೇಶ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು ಮುಖಂಡರಾದ ಪೆದ್ದನಪಾಳ್ಯ ಮಣಿ, ಕಾಂಚಳ್ಳಿ ನಟರಾಜು, ಸಿಕಂದರ್ ಪಾಷಾ ಷಣ್ಮುಗ,ಸೋಮಣ್ಣ ರಾಜೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

12 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

13 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

14 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

14 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

14 hours ago