ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿರವರ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಆರ್ಥಿಕ ನೀತಿಯಿಂದ ಭಾರತ ಇಂದು ಸುಭದ್ರವಾದ ನೆಲೆಗಟ್ಟಿನಲ್ಲಿ ನಿಂತಿದೆ. ಪ್ರಜಾಪ್ರಭುತ್ವ, ಸಂವಿಧಾನ ಗಟ್ಟಿಯಾಗಿ ನಿಂತಿರಲು ಹಾಗೂ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸುಭದ್ರವಾಗಿದೆ. ಉಳುವವನೇ ಭೂಮಿ ಒಡೆಯ ಕಾಯ್ದೆ ತಂದ ನಂತರ ಲಕ್ಷಾಂತರ ರೈತರು ತಮ್ಮ ಜೀವನ ಕಂಡುಕೊಂಡಿದ್ದಾರೆ. ಹಿಂದೆ ಕೇವಲ ಉಳ್ಳವರಿಗಷ್ಟೇ ಬ್ಯಾಂಕ್ ನಲ್ಲಿ ವ್ಯವಹಾರ ನಡೆಸುವ ಪದ್ದತಿ ಇತ್ತು ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ನಂತರ ಎಲ್ಲರಿಗೂ ವ್ಯವಹಾರಿಕವಾಗಿ ಬ್ಯಾಂಕ್ ನಲ್ಲಿ ಅನುಕೂಲವಾಗಿದೆ.ಸಾಮಾಜಿಕ ನ್ಯಾಯದಡಿ ಜೀತಪದ್ಧತಿ ಹೋಗಲಾಡಿಸಿದ ನಂತರ ಲಕ್ಷಾಂತರ ಜನರು ಸ್ವತಂತ್ರ ಬದುಕು ಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಂತಸ ತಂದಿದೆ: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆರವರು ಆಯ್ಕೆಯಾಗಿರುವುದು ತುಂಬಾ ಸಂತಸದ ವಿಚಾರವಾಗಿದೆ.ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಇಂತಹ ದೊಡ್ಡ ಕಾಂಗ್ರೆಸ್ ಪಕ್ಷಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷರಾಗಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಇವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾವು ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಹನೂರು ಪಟ್ಟಣದ ನಿವಾಸಿ ಪ್ರಭು ಜೆಡಿಎಸ್ ತೊರೆದು ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸೊಳೇರಿಪಾಳ್ಯ ಗ್ರಾಪಂ ಅಧ್ಯಕ್ಷೆ ಸುಧಾ, ಸದಸ್ಯ ಬಸವರಾಜು ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಪತ್ ಕುಮಾರ್ ಸುದೇಶ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು ಮುಖಂಡರಾದ ಪೆದ್ದನಪಾಳ್ಯ ಮಣಿ, ಕಾಂಚಳ್ಳಿ ನಟರಾಜು, ಸಿಕಂದರ್ ಪಾಷಾ ಷಣ್ಮುಗ,ಸೋಮಣ್ಣ ರಾಜೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…