ಜಿಲ್ಲೆಗಳು

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ

ಹನೂರು: ಬಡವರ ದೀನ ದಲಿತರ ಏಳಿಗೆಗೆ ಶ್ರಮಿಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ .ಇಂದಿರಾ ಗಾಂಧಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿರವರ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಆರ್ಥಿಕ ನೀತಿಯಿಂದ ಭಾರತ ಇಂದು ಸುಭದ್ರವಾದ ನೆಲೆಗಟ್ಟಿನಲ್ಲಿ ನಿಂತಿದೆ. ಪ್ರಜಾಪ್ರಭುತ್ವ, ಸಂವಿಧಾನ ಗಟ್ಟಿಯಾಗಿ ನಿಂತಿರಲು ಹಾಗೂ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸುಭದ್ರವಾಗಿದೆ. ಉಳುವವನೇ ಭೂಮಿ ಒಡೆಯ ಕಾಯ್ದೆ ತಂದ ನಂತರ ಲಕ್ಷಾಂತರ ರೈತರು ತಮ್ಮ ಜೀವನ ಕಂಡುಕೊಂಡಿದ್ದಾರೆ. ಹಿಂದೆ ಕೇವಲ ಉಳ್ಳವರಿಗಷ್ಟೇ ಬ್ಯಾಂಕ್ ನಲ್ಲಿ ವ್ಯವಹಾರ ನಡೆಸುವ ಪದ್ದತಿ ಇತ್ತು ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ನಂತರ ಎಲ್ಲರಿಗೂ ವ್ಯವಹಾರಿಕವಾಗಿ ಬ್ಯಾಂಕ್ ನಲ್ಲಿ ಅನುಕೂಲವಾಗಿದೆ.ಸಾಮಾಜಿಕ ನ್ಯಾಯದಡಿ ಜೀತಪದ್ಧತಿ ಹೋಗಲಾಡಿಸಿದ ನಂತರ ಲಕ್ಷಾಂತರ ಜನರು ಸ್ವತಂತ್ರ ಬದುಕು ಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಂತಸ ತಂದಿದೆ: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆರವರು ಆಯ್ಕೆಯಾಗಿರುವುದು ತುಂಬಾ ಸಂತಸದ ವಿಚಾರವಾಗಿದೆ.ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಇಂತಹ ದೊಡ್ಡ ಕಾಂಗ್ರೆಸ್ ಪಕ್ಷಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷರಾಗಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಇವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾವು ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹನೂರು ಪಟ್ಟಣದ ನಿವಾಸಿ ಪ್ರಭು ಜೆಡಿಎಸ್ ತೊರೆದು ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಸೊಳೇರಿಪಾಳ್ಯ ಗ್ರಾಪಂ ಅಧ್ಯಕ್ಷೆ ಸುಧಾ, ಸದಸ್ಯ ಬಸವರಾಜು ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಪತ್ ಕುಮಾರ್ ಸುದೇಶ್, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು ಮುಖಂಡರಾದ ಪೆದ್ದನಪಾಳ್ಯ ಮಣಿ, ಕಾಂಚಳ್ಳಿ ನಟರಾಜು, ಸಿಕಂದರ್ ಪಾಷಾ ಷಣ್ಮುಗ,ಸೋಮಣ್ಣ ರಾಜೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago