ಜಿಲ್ಲೆಗಳು

ರಾಹುಲ್ ಹೋದಡೆಯಲ್ಲೆಲ್ಲ ಕಾಂಗ್ರೆಸ್ ನೆಲಕಚ್ಚಿದೆ: ಅಶ್ವತ್ಥ ನಾರಾಯಣ

ನಂಜನಗೂಡು: ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚಿದೆ. ಈಗ ಆ ಸರದಿ ಕರ್ನಾಟಕ ಕಾಂಗ್ರೆಸ್‌ನದ್ದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಲೇವಡಿ ಮಾಡಿದರು.

ನಗರದ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಇಂದಿನಿಂದ ರಾಜ್ಯ ಪ್ರವಾಸ ಮಾಡುತ್ತಿರುವುದು ನೋಡಿದರೆ ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ವಿರೋಧ ಪಕ್ಷದ ಸ್ತಾನದಲ್ಲಿದೆ ಇದೀಗ ರಾಹುಲ್ ಗಾಂಧಿ ಪಾದಯಾತ್ರೆಯಿಂದಾಗಿ ಮುಂದೆ ಅಷ್ಟು ಸ್ಥಾನಗಳು ಕಾಂಗ್ರೆಸ್ ಪಾಲಿಗೆ ಇಲ್ಲವಾಗುತ್ತದೆ ಎಂದು ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್ ನವರು ಭಾರತವನ್ನು ಒಗ್ಗೂಡಿಸುವ ಕೆಲಸವನ್ನು ಯಾವತ್ತೂ ಮಾಡಿಲ್ಲ.
ದೇಶ ಒಡೆದವರೇ ಅವರು. ದೇಶವನ್ನು ಒಡೆಯುವುದೇ ಇವರ ಕೆಲಸವಾಗಿದೆ.
ಅದಕ್ಕಾಗಿ ಅವರು ಆ ಕಾಲದಿಂದಲೂ ತುಕ್ಡೆ ತುಕ್ಡೆ ಗ್ಯಾಂಗ್‌ಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ೩೨ ಸಾವಿರ ಚ.ಕಿ.ಮೀ. ಭಾರತದ ಗಡಿಭಾಗ ಚೀನಾ ದೇಶಕ್ಕೆ ಬಿಟ್ಟುಕೊಟ್ಟಿದ್ದು ಯಾರು? ಪಾಕಿಸ್ತಾನ ವಿರುದ್ಧ ಯುದ್ಧದಲ್ಲಿ ಗೆದ್ದರೂ ಸಂಪೂರ್ಣವಾಗಿ ಕಾಶ್ಮೀರವನ್ನು ವಶಕ್ಕೆ ಪಡೆಯುದೇ ಸಮಸ್ಯೆ ಜೀವಂತವಾಗಿರಿಸಿದವರು ಕಾಂಗ್ರೆಸ್ ನವರಲ್ಲವೆ ಎಂದು ಪ್ರಶ್ನಿಸಿದರು.

ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಇಟ್ಟುಕೊಂಡು ಕೇಂದ್ರ ಸರ್ಕಾರ ಪಿಎಫ್‌ಐ ಸೇರಿದಂತೆ ೮ ಸಂಘಟನೆಗಳನ್ನು ನಿಷೇಧ ಹೇರುವ ದಿಟ್ಟ ಕ್ರಮ ಕೈಗೊಂಡಿದೆ. ಇಂತಹ ಸಂದರ್ಭದಲ್ಲಿ ಎಸ್‌ಡಿಪಿಐ ನಾಯಕರು ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿರುವುದನ್ನು ಎಸ್‌ಡಿಪಿಐ ಖಂಡಿಸದಿರುವುದೇ ಅವರ ಈ ಸಂಬಂಧಕ್ಕೆ ಸಾಕ್ಷಿಯಾಗಿದೆ ಎಂದರು.

ದೇಶಪ್ರೇಮ ಹಾಗೂ ದೇಶಭಕ್ತಿಯನ್ನು ಬಿತ್ತುವಲ್ಲಿ ಆರ್‌ಎಸ್‌ಎಸ್ ಅಹರ್ನಿಶಿ ಸೇವೆ ಸಲ್ಲಿಸುತ್ತಿದೆ. ಇಂತಹ ಸ್ವಯಂಸೇವಾ ಸಂಸ್ಥೆ ಜತೆಗೆ ಪಿಎಫ್‌ಐ ಸಂಘಟನೆಯನ್ನು ಹೋಲಿಕೆ ಮಾಡಿ ಅದನ್ನು ಬ್ಯಾನ್ ಮಾಡಿ ಎಂದು ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಬಾಲಿಶವಾದದು. ಇಂತಹವರಿಗೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ. ಮುಂದೆಯೂ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

.

andolanait

Recent Posts

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

19 mins ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

31 mins ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

47 mins ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

55 mins ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

1 hour ago

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…

2 hours ago