ಜಿಲ್ಲೆಗಳು

ರಾಹುಲ್ ಹೋದಡೆಯಲ್ಲೆಲ್ಲ ಕಾಂಗ್ರೆಸ್ ನೆಲಕಚ್ಚಿದೆ: ಅಶ್ವತ್ಥ ನಾರಾಯಣ

ನಂಜನಗೂಡು: ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚಿದೆ. ಈಗ ಆ ಸರದಿ ಕರ್ನಾಟಕ ಕಾಂಗ್ರೆಸ್‌ನದ್ದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಲೇವಡಿ ಮಾಡಿದರು.

ನಗರದ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಇಂದಿನಿಂದ ರಾಜ್ಯ ಪ್ರವಾಸ ಮಾಡುತ್ತಿರುವುದು ನೋಡಿದರೆ ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ವಿರೋಧ ಪಕ್ಷದ ಸ್ತಾನದಲ್ಲಿದೆ ಇದೀಗ ರಾಹುಲ್ ಗಾಂಧಿ ಪಾದಯಾತ್ರೆಯಿಂದಾಗಿ ಮುಂದೆ ಅಷ್ಟು ಸ್ಥಾನಗಳು ಕಾಂಗ್ರೆಸ್ ಪಾಲಿಗೆ ಇಲ್ಲವಾಗುತ್ತದೆ ಎಂದು ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್ ನವರು ಭಾರತವನ್ನು ಒಗ್ಗೂಡಿಸುವ ಕೆಲಸವನ್ನು ಯಾವತ್ತೂ ಮಾಡಿಲ್ಲ.
ದೇಶ ಒಡೆದವರೇ ಅವರು. ದೇಶವನ್ನು ಒಡೆಯುವುದೇ ಇವರ ಕೆಲಸವಾಗಿದೆ.
ಅದಕ್ಕಾಗಿ ಅವರು ಆ ಕಾಲದಿಂದಲೂ ತುಕ್ಡೆ ತುಕ್ಡೆ ಗ್ಯಾಂಗ್‌ಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ೩೨ ಸಾವಿರ ಚ.ಕಿ.ಮೀ. ಭಾರತದ ಗಡಿಭಾಗ ಚೀನಾ ದೇಶಕ್ಕೆ ಬಿಟ್ಟುಕೊಟ್ಟಿದ್ದು ಯಾರು? ಪಾಕಿಸ್ತಾನ ವಿರುದ್ಧ ಯುದ್ಧದಲ್ಲಿ ಗೆದ್ದರೂ ಸಂಪೂರ್ಣವಾಗಿ ಕಾಶ್ಮೀರವನ್ನು ವಶಕ್ಕೆ ಪಡೆಯುದೇ ಸಮಸ್ಯೆ ಜೀವಂತವಾಗಿರಿಸಿದವರು ಕಾಂಗ್ರೆಸ್ ನವರಲ್ಲವೆ ಎಂದು ಪ್ರಶ್ನಿಸಿದರು.

ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಇಟ್ಟುಕೊಂಡು ಕೇಂದ್ರ ಸರ್ಕಾರ ಪಿಎಫ್‌ಐ ಸೇರಿದಂತೆ ೮ ಸಂಘಟನೆಗಳನ್ನು ನಿಷೇಧ ಹೇರುವ ದಿಟ್ಟ ಕ್ರಮ ಕೈಗೊಂಡಿದೆ. ಇಂತಹ ಸಂದರ್ಭದಲ್ಲಿ ಎಸ್‌ಡಿಪಿಐ ನಾಯಕರು ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿರುವುದನ್ನು ಎಸ್‌ಡಿಪಿಐ ಖಂಡಿಸದಿರುವುದೇ ಅವರ ಈ ಸಂಬಂಧಕ್ಕೆ ಸಾಕ್ಷಿಯಾಗಿದೆ ಎಂದರು.

ದೇಶಪ್ರೇಮ ಹಾಗೂ ದೇಶಭಕ್ತಿಯನ್ನು ಬಿತ್ತುವಲ್ಲಿ ಆರ್‌ಎಸ್‌ಎಸ್ ಅಹರ್ನಿಶಿ ಸೇವೆ ಸಲ್ಲಿಸುತ್ತಿದೆ. ಇಂತಹ ಸ್ವಯಂಸೇವಾ ಸಂಸ್ಥೆ ಜತೆಗೆ ಪಿಎಫ್‌ಐ ಸಂಘಟನೆಯನ್ನು ಹೋಲಿಕೆ ಮಾಡಿ ಅದನ್ನು ಬ್ಯಾನ್ ಮಾಡಿ ಎಂದು ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಬಾಲಿಶವಾದದು. ಇಂತಹವರಿಗೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ. ಮುಂದೆಯೂ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago