ಜಿಲ್ಲೆಗಳು

ರಾಹುಲ್ ಹೋದಡೆಯಲ್ಲೆಲ್ಲ ಕಾಂಗ್ರೆಸ್ ನೆಲಕಚ್ಚಿದೆ: ಅಶ್ವತ್ಥ ನಾರಾಯಣ

ನಂಜನಗೂಡು: ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚಿದೆ. ಈಗ ಆ ಸರದಿ ಕರ್ನಾಟಕ ಕಾಂಗ್ರೆಸ್‌ನದ್ದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಲೇವಡಿ ಮಾಡಿದರು.

ನಗರದ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಇಂದಿನಿಂದ ರಾಜ್ಯ ಪ್ರವಾಸ ಮಾಡುತ್ತಿರುವುದು ನೋಡಿದರೆ ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ವಿರೋಧ ಪಕ್ಷದ ಸ್ತಾನದಲ್ಲಿದೆ ಇದೀಗ ರಾಹುಲ್ ಗಾಂಧಿ ಪಾದಯಾತ್ರೆಯಿಂದಾಗಿ ಮುಂದೆ ಅಷ್ಟು ಸ್ಥಾನಗಳು ಕಾಂಗ್ರೆಸ್ ಪಾಲಿಗೆ ಇಲ್ಲವಾಗುತ್ತದೆ ಎಂದು ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್ ನವರು ಭಾರತವನ್ನು ಒಗ್ಗೂಡಿಸುವ ಕೆಲಸವನ್ನು ಯಾವತ್ತೂ ಮಾಡಿಲ್ಲ.
ದೇಶ ಒಡೆದವರೇ ಅವರು. ದೇಶವನ್ನು ಒಡೆಯುವುದೇ ಇವರ ಕೆಲಸವಾಗಿದೆ.
ಅದಕ್ಕಾಗಿ ಅವರು ಆ ಕಾಲದಿಂದಲೂ ತುಕ್ಡೆ ತುಕ್ಡೆ ಗ್ಯಾಂಗ್‌ಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ೩೨ ಸಾವಿರ ಚ.ಕಿ.ಮೀ. ಭಾರತದ ಗಡಿಭಾಗ ಚೀನಾ ದೇಶಕ್ಕೆ ಬಿಟ್ಟುಕೊಟ್ಟಿದ್ದು ಯಾರು? ಪಾಕಿಸ್ತಾನ ವಿರುದ್ಧ ಯುದ್ಧದಲ್ಲಿ ಗೆದ್ದರೂ ಸಂಪೂರ್ಣವಾಗಿ ಕಾಶ್ಮೀರವನ್ನು ವಶಕ್ಕೆ ಪಡೆಯುದೇ ಸಮಸ್ಯೆ ಜೀವಂತವಾಗಿರಿಸಿದವರು ಕಾಂಗ್ರೆಸ್ ನವರಲ್ಲವೆ ಎಂದು ಪ್ರಶ್ನಿಸಿದರು.

ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಇಟ್ಟುಕೊಂಡು ಕೇಂದ್ರ ಸರ್ಕಾರ ಪಿಎಫ್‌ಐ ಸೇರಿದಂತೆ ೮ ಸಂಘಟನೆಗಳನ್ನು ನಿಷೇಧ ಹೇರುವ ದಿಟ್ಟ ಕ್ರಮ ಕೈಗೊಂಡಿದೆ. ಇಂತಹ ಸಂದರ್ಭದಲ್ಲಿ ಎಸ್‌ಡಿಪಿಐ ನಾಯಕರು ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿರುವುದನ್ನು ಎಸ್‌ಡಿಪಿಐ ಖಂಡಿಸದಿರುವುದೇ ಅವರ ಈ ಸಂಬಂಧಕ್ಕೆ ಸಾಕ್ಷಿಯಾಗಿದೆ ಎಂದರು.

ದೇಶಪ್ರೇಮ ಹಾಗೂ ದೇಶಭಕ್ತಿಯನ್ನು ಬಿತ್ತುವಲ್ಲಿ ಆರ್‌ಎಸ್‌ಎಸ್ ಅಹರ್ನಿಶಿ ಸೇವೆ ಸಲ್ಲಿಸುತ್ತಿದೆ. ಇಂತಹ ಸ್ವಯಂಸೇವಾ ಸಂಸ್ಥೆ ಜತೆಗೆ ಪಿಎಫ್‌ಐ ಸಂಘಟನೆಯನ್ನು ಹೋಲಿಕೆ ಮಾಡಿ ಅದನ್ನು ಬ್ಯಾನ್ ಮಾಡಿ ಎಂದು ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಬಾಲಿಶವಾದದು. ಇಂತಹವರಿಗೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ. ಮುಂದೆಯೂ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago