ಜಿಲ್ಲೆಗಳು

ಕಾಂಗ್ರೆಸಿಗರೇ ನಿಜವಾದ ಹಿಂದೂಗಳು: ಉಗ್ರಪ್ಪ

ಮೈಸೂರು: ಕಾಂಗ್ರೆಸ್ಸಿಗರೇ ನಿಜವಾದ ಹಿಂದುಗಳು. ಆರ್‌ಎಸ್‌ಎಸ್, ಬಿಜೆಪಿ ಹಿಂದುತ್ವದ ವಿರೋಧಿಗಳು. ನಮಗೆ ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇದೆ. ಆದರೆ ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ. ಹಾಗಾಗಿ ಇವರು ಹಿಂದೂಗಳಲ್ಲಿನ ಮನುವಾದಿಗಳು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.

ಬುಧವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತಕ್ಕೆ ಬರುವ ಮುನ್ನ ಮೋದಿಯವರು ನೀಡಿದ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿದ್ದಾರೆ?. ವಿದೇಶದಲ್ಲಿದ್ದ ಕಪ್ಪು ಹಣ ತರಲಿಲ್ಲ. ಪ್ರತಿ ವರ್ಷ ೨ ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಯಿತು. ಕೊಟ್ಟ ಮಾತಿನಂತೆ ನಡೆದುಕೊಳ್ಳದವರನ್ನು ಏನೆಂದು ಕರೆಯಬೇಕು? ಎಂದು ಪ್ರಶ್ನಿಸಿದರು.

ಕೊಟ್ಟ ಮಾತಿನಂತೆ ನಡೆದುಕೊಳ್ಳದ, ವಾಗ್ದಾನಗಳನ್ನು ಈಡೇರಿಸದ ಬಿಜೆಪಿಯವರು ಶ್ರೀರಾಮನಿಗೆ ದ್ರೋಹ ಬಗೆದವರು. ಪತ್ನಿಯ ರಕ್ಷಣೆಗಾಗಿ ಶ್ರೀರಾಮಚಂದ್ರ ಲಂಕೆಯ ರಾವಣನ ವಿರುದ್ಧ ಯುದ್ಧ ಮಾಡಿದ್ದ. ಪಂಚಭೂತಗಳ ಸಾಕ್ಷಿಯಾಗಿ ವಿವಾಹವಾದ ನರೇಂದ್ರ ಮೋದಿ ತನ್ನ ಪತ್ನಿಗೆ ರಕ್ಷಣೆ ಕೊಡಲಿಲ್ಲ. ಮೋದಿ ಅವರ ರಾಮಾಯಣ ಓದಿದ್ದಾರೋ ಇಲ್ಲವೋ ತಿಳಿದಿಲ್ಲ. ನಿಜ ರಾಮನಿಗೆ ಅಪಚಾರ ಎಸಗಿದ್ದು ಮೋದಿ ಮತ್ತು ಸಂಘ ಪರಿವಾರ ಎಂದು ವ್ಯಂಗ್ಯಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆ ವೇಳೆ ಏಕರೂಪ ನಾಗರಿಕ ಸಂಹಿತೆ ಜಾರಿ ಸಂಬಂಧಿ ಪ್ರಸ್ತಾಪ ಮಾಡುತ್ತಿದ್ದಾರೆ. ಆದರೆ, ಈ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗಿ ಅಂಗೀಕರಿಸಬೇಕು. ಬಿಜೆಪಿಯವರು ನಿಜ ಹಿಂದೂತ್ವವಾದಿಗಳಾಗಿದ್ದರೆ ಈ ಕುರಿತು ಸಂಸತ್ತಿನಲ್ಲಿ ಅಂಗೀಕಾರ ಮಾಡಬೇಕು ಎಂದರು.

ಮೇಲ್ವರ್ಗದ ಬಡವರಿಗೆ ಶೇ. 11 ಮೀಸಲು ನೀಡುವ ಮೂಲಕ ಸಂವಿಧಾನ ಮತ್ತು ಅಂಬೇಡ್ಕರ್ ವಿಚಾರಕ್ಕೆ ದ್ರೋಹ ಎಸಗಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಯಾವ ಆಧಾರದಲ್ಲಿ ಮೀಸಲು ಕೊಡಬೇಕೆಂದು ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಅದರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡಬೇಕೆಂದು ಎಲ್ಲಿಯೂ ಇಲ್ಲ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟು ಅನುದಾನವನ್ನು ಆಯಾ ವರ್ಷವೇ ಖರ್ಚು ಮಾಡಬೇಕೆಂದು ಸಿದ್ದರಾಮಯ್ಯ ಕಾನೂನು ತಂದರು. ಈಗಿನ ಬೊಮ್ಮಾಯಿ ಸರ್ಕಾರ ವಿದ್ಯಾರ್ಥಿ ವೇತನ, ಸಂಶೋಧಕರಿಗೆ ಶಿಷ್ಯ ವೇತನ ನೀಡಿಲ್ಲ. ಬೆಂಗಳೂರಿನ ಕೇಶವ ಕೃಪಾ, ಹೆಡಗೇವಾರ್ ಭವನದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸುವ ಬಿಜೆಪಿಯರಿಗೆ ಸ್ವಾತಂತ್ರ್ಯ ಎಂಬುದೇ ಇಲ್ಲ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಬಿಜೆಪಿಯವರು ಲಘುವಾಗಿ ಮಾತಾಡುವುದು ಶೋಭೆ ತರುವುದಿಲ್ಲ. ಸ್ವಾತಂತ್ರ್ಯ ಗಳಿಸಿಕೊಟ್ಟ ಪಕ್ಷವೊಂದರ ಅಧ್ಯಕ್ಷರಾಗಿ ಸೈದ್ಧಾಂತಿಕವಾಗಿ ಯಾವ ರೀತಿ ಪಕ್ಷವನ್ನು ಮುನ್ನಡೆಸಬೇಕೆಂಬ ಶಕ್ತಿ ಖರ್ಗೆ ಅವರಿಗಿದೆ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ. ಈ ಸತ್ಯ ಅರಿವಾಗಿ ಬಿಜೆಪಿಯವರು ವಾಮಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಹತಾಶರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಕಾರ್ಮೋಡ ಕಾಣಿಸುತ್ತಿದೆ. ಮುಖ್ಯಮಂತ್ರಿ ರಾಜ್ಯದ ಆಡಳಿತ ಮರೆತಿದ್ದಾರೆ. ಮಂತ್ರಿಮಂಡಲದಲ್ಲಿ ಹೇಗೆ ಚುನಾವಣೆ ಎದುರಿಸಬೇಕೆಂಬ ಚಿಂತೆಯಲ್ಲಿ ಮಗ್ನರಾಗಿದ್ದಾರೆ. ರಾಜ್ಯವ್ಯಾಪಿ ಪ್ರವಾಸ ಮಾಡುತ್ತ ಮನಸೋ ಇಚ್ಛೆ ಮಾತಾಡುತ್ತಿದ್ದಾರೆ. ಡಬ್ಬಲ್ ಇಂಜಿನ್ ಸರ್ಕಾರ ಎಲ್ಲ ರೀತಿಯಲ್ಲೂ ವಿಫಲವಾಗಿದೆ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಭಾಸ್ಕರ್ ಎಲ್.ಗೌಡ, ಹುಣಸೂರು ಬಸವಣ್ಣ, ಡಿ.ನಾಗಭೂಷಣ್, ಗಿರೀಶ್, ಮಹೇಶ್ ಸುದ್ದಿಗೋಷ್ಠಿಯಲ್ಲಿದ್ದರು.

andolana

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

29 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

5 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

7 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

7 hours ago