ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.…
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು…
ಮೈಸೂರು: ಇಂದು ಮುಂಜಾನೆ ಚಳಿ, ಮಳೆಯನ್ನು ಲೆಕ್ಕಿಸದೇ ಮೈಸೂರಿನ ಸ್ವಚ್ಚತೆಗಾಗಿ ಫಿಟ್ ಮೈಸೂರು ಸಾಮೂಹಿಕ ಆರೋಗ್ಯ ಮತ್ತು ಜಾಗೃತಿ ನಡಿಗೆ…
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…