ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…