ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…