ಜಿಲ್ಲೆಗಳು

ಹನೂರು: 5 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ : ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago