ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…