ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…