ಜಿಲ್ಲೆಗಳು

ಕುವೆಂಪು ಶಾಲೆಗೆ ಜೆ.ಕೆ.ಟೈರ್ಸ್‌ನಿಂದ ಶೌಚಾಲಯ ನಿರ್ಮಾಣ ಭರವಸೆ

ಮೈಸೂರು: ಗಂಗೋತ್ರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ನಿರ್ಮಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹ, ಜೆ.ಕೆ.ಟೈರ್ಸ್‌ ಕಂಪೆನಿಗೆ ಮನವಿ ಮಾಡಿದ್ದು, ಕಂಪೆನಿಯ ಮೈಸೂರಿನ ಘಟಕದ ಮುಖ್ಯಸ್ಥರಾದ ಈಶ್ವರ್ ಅವರ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಸಂಸದರು, ಕಂಪೆನಿಯ ಸಿಎಸ್‌ಆರ್ ನಿಧಿಯಲ್ಲಿ ಕೂಡಲೇ ಹೊಸ ಶೌಚಾಲಯ ನಿರ್ಮಾಣ ಮಾಡುವ ಭರವಸೆ ನೀಡಿದರು.

ಗಂಗೋತ್ರಿ ಶಾಲೆಯಲ್ಲಿ ಒಟ್ಟು 380 ವಿದ್ಯಾರ್ಥಿಗಳಿದ್ದು, ಎರಡು ಶೌಚಾಲಯಗಳು  ಮಾತ್ರ ಇದೆ. ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಹಾಸ್ಟೆಲ್ ಬ್ಲಾಕ್ ೧ರಲ್ಲಿನ ಶೌಚಾಲಯಗಳು ಸೋರಿಕೆ ಸಮಸ್ಯೆಗಳಿಂದ ಕೂಡಿದೆ. ಈ ಶೌಚಾಲಯಗಳನ್ನು ಪ್ರತಿದಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಳಸುತ್ತಿದ್ದು, ತಕ್ಷಣ ನವೀಕರಣ ಅಗತ್ಯವಿದೆ. ಹಾಸ್ಟೆಲ್‌ಗೆ ಟೇಬಲ್, ಚೇರ್‌ಗಳು ಮತ್ತು ಉತ್ತಮ ಬೆಳಕಿನ ಸೌಲಭ್ಯದೊಂದಿಗೆ ಅಧ್ಯಯನ ಕೊಠಡಿ. ಅಲ್ಲದೇ ಸಂಶೋಧಕರಿಗೆ 60 ಲ್ಯಾಪ್‌ಟಾಪ್‌ಗಳನ್ನು ಒದಗಿಸುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.


ಕುವೆಂಪು ಅವರ ಕಾಲದಲ್ಲಿ ಆರಂಭವಾದ ಕುವೆಂಪು ಸ್ಕೂಲ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಸಂಶೋಧನಾ ಮತ್ತು ಪಿ.ಜಿ. ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಶೌಚಾಲಯ ಮತ್ತು ಸ್ನಾನಗೃಹ ಕೊರತೆಯಿಂದ ತೀವ್ರ ತೊಂದರೆ ಆಗುತ್ತಿದೆ ಎಂದು ಸಿಂಡಿಕೇಟ್ ಸದಸ್ಯೆ ಡಾ. ಚೈತ್ರಾ ನಾರಾಯಣ್ ರವರು ಸಂಸದ ಪ್ರತಾಪ್ ಸಿಂಹ ಅವರ ಗಮನಕ್ಕೆ ತಂದಿದ್ದರು.

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

4 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

4 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

5 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

5 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

5 hours ago