ಜಿಲ್ಲಾ ಪಂಚಾಯಿತಿ ಮುಂಭಾಗ ಕರ್ನಾಟಕ ವೀರ ಕೇಸರಿ ಪಡೆಯಿಂದ ಪ್ರತಿಭಟನೆ
ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ವೀರ ಕೇಸರಿ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಜವಾವಣೆಗೊಂಡ ಪ್ರತಿಭಟನಾಕಾರರು, ಪಂಚಾುಂತ್ ರಾಜ್ ಇಂಜಿನಿಯರಿಂಗ್ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ತುಂಡು ಗುತ್ತಿಗೆಯನ್ನು ಅಧಿಕಾರಿಗಳು ತಮಗಿಷ್ಟ ಬಂದವರಿಗೆ ನೀಡಿ ಅಕ್ರಮ ಎಸಗಿದ್ದಾರೆ. ಸರ್ಕಾರಿ ನಿಯಮದಂತೆ ತುಂಡು ಗುತ್ತಿಗೆ ಕಾಮಗಾರಿ ಕೋರಿ ಅರ್ಜಿ ಸಲ್ಲಿಸಿರುವ ಗುತ್ತಿಗೆದಾರರಿಗೆ ಜ್ಯೇಷ್ಠತೆ ಅನ್ವಯ ಕಾಮಗಾರಿ ನೀಡಬೇಕು. ಗುತ್ತಿಗೆದಾರರು ಅರ್ಜಿ ಸಲ್ಲಿಸಿರುವ ವಿವರವನ್ನು ಸ್ವೀಕೃತಿ ವಹಿ ಪುಸ್ತಕದಲ್ಲಿ ನಮೂದು ಮಾಡಬೇಕು. ಆದರೆ, ಅಧಿಕಾರಿಗಳು ಅರ್ಜಿ ಸಲ್ಲಿಸದ ಗುತ್ತಿಗೆದಾರರಿಗೆ ಕಾಮಗಾರಿ ನೀಡಿ ಅರ್ಹರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮದ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುತ್ತಿಲ್ಲ. ಕೂಡಲೇ ಸರ್ಕಾರ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಮಧುವನ ಚಂದ್ರು, ಕಾರ್ಯದರ್ಶಿ ಮಹದೇವು, ಗೌರವ ಸಲಹೆಗಾರ ಆಲಗೂಡು ಬಸವರಾಜು, ಗುತ್ತಿಗೆದಾರರಾದ ಶಾಲಾಕ್ಷ, ದೇವರಾಜು, ಪ್ರವೀಣ್, ಮರಿಸ್ವಾಮಿ, ರತ್ನಮ್ಮ, ಕನಕಮ್ಮ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…