ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ.
ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ ಗ್ರಾಮದ ಹೊರವಲಯದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ಬೇಗೂರು – ಬೆಳಚಲವಾಡಿ ರಸ್ತೆ ಜಲಾವೃತಗೊಂಡು ಈ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸಾವರರು ಪಾದಚಾರಿಗಳು ಪರದಾಡುವಂತಾಯಿತು.
ಬೇಗೂರು ಗ್ರಾಮದ ಗುಂಡಪ್ಪ, ಕಾಳಿಂಗಪ್ಪ ನವರ ಮನೆ ರಸ್ತೆ ಪಕ್ಕದಲ್ಲಿರುವ ಅಂಗಡಿಗಳು ಮಳೆಯ ನೀರಿನಲ್ಲಿ ಜಲಾವೃತವಾಗಿವೆ. ಚಿಕ್ಕಾಟಿ ಗ್ರಾಮದಲ್ಲಿ ಕೆರೆ ತುಂಬಿ ಹರಿಯುತ್ತಿದ್ದು ಕೆರೆಗೆ ಹರಿದು ಬರುತ್ತಿದ್ದ ನೀರಿನ ಕಾಲುವೆಗಳಲ್ಲಿ ನೀರು ಹರಿದು ಕೆರೆಗೆ ಹೋಗದ ಕಾರಣ ಕಾಲುವೆಗಳ ಅಕ್ಕಪಕ್ಕದಲ್ಲಿರುವ ೧೦ ಕ್ಕೂ ಹೆಚ್ಚು ಮನೆಗಳು ಮಳೆ ನೀರಿನಲ್ಲಿ ಮುಳುಗಿವೆ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರಿನಲ್ಲಿ ಮುಳುಗಿವೆ.
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…