ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ.
ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ ಗ್ರಾಮದ ಹೊರವಲಯದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ಬೇಗೂರು – ಬೆಳಚಲವಾಡಿ ರಸ್ತೆ ಜಲಾವೃತಗೊಂಡು ಈ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸಾವರರು ಪಾದಚಾರಿಗಳು ಪರದಾಡುವಂತಾಯಿತು.
ಬೇಗೂರು ಗ್ರಾಮದ ಗುಂಡಪ್ಪ, ಕಾಳಿಂಗಪ್ಪ ನವರ ಮನೆ ರಸ್ತೆ ಪಕ್ಕದಲ್ಲಿರುವ ಅಂಗಡಿಗಳು ಮಳೆಯ ನೀರಿನಲ್ಲಿ ಜಲಾವೃತವಾಗಿವೆ. ಚಿಕ್ಕಾಟಿ ಗ್ರಾಮದಲ್ಲಿ ಕೆರೆ ತುಂಬಿ ಹರಿಯುತ್ತಿದ್ದು ಕೆರೆಗೆ ಹರಿದು ಬರುತ್ತಿದ್ದ ನೀರಿನ ಕಾಲುವೆಗಳಲ್ಲಿ ನೀರು ಹರಿದು ಕೆರೆಗೆ ಹೋಗದ ಕಾರಣ ಕಾಲುವೆಗಳ ಅಕ್ಕಪಕ್ಕದಲ್ಲಿರುವ ೧೦ ಕ್ಕೂ ಹೆಚ್ಚು ಮನೆಗಳು ಮಳೆ ನೀರಿನಲ್ಲಿ ಮುಳುಗಿವೆ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರಿನಲ್ಲಿ ಮುಳುಗಿವೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…