ಜಿಲ್ಲೆಗಳು

ವಿವಾದಕ್ಕೆ ಇತಿಶ್ರೀ ಹಾಡಿ: ಅಶೋಕ್ ಹಾರನಹಳ್ಳಿಗೆ ಸಿದ್ದು ಸಲಹೆ

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ

ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ಅವರು ಮೈಸೂರಿನಲ್ಲಿ ನಡೆದ ಸಿದ್ದರಾಮಯ್ಯಅವರ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರ ಜತೆ ಮಾತನಾಡಿರುವ ಸಿದ್ದರಾಮಯ್ಯ, ಸಮಾಜದಲ್ಲಿನ ಎಲ್ಲ ಸಮುದಾಯಗಳ ಬಗ್ಗೆ ನನಗೆ ಗೌರವವಿದೆ. ಇದುವರೆಗಿನ ರಾಜಕಾರಣದಲ್ಲಿ ನಾನು ಯಾವ ಸಮುದಾಯವನ್ನು ಅಗೌರವದಿಂದ ಕಂಡಿಲ್ಲ, ಮೈಸೂರಿನಲ್ಲಿ ಪ.ಮಲ್ಲೇಶ್ ಹೇಳಿಕೆ ಕುರಿತು ಉಂಟಾಗಿರುವ ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಇದನ್ನು ಇಲ್ಲಿಗೇ ನಿಲ್ಲಿಸಿ ಎಲ್ಲರೂ ಒಟ್ಟಿಗೆ ಹೋಗಬೇಕಿದೆ. ಇದೇ ಹಿನ್ನೆಲೆಯಲ್ಲಿ ಮಲ್ಲೇಶ್ ಅವರು ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇನ್ನು ಮುಂದೆ ಯಾವುದೇ ವಿವಾದಗಳಿಗೂ ಅವಕಾಶಮಾಡಿ ಕೊಡುವುದು ಬೇಡ ಎಂದಿದ್ದಾರೆ.

 

 

 

andolanait

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

14 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

2 hours ago