ಜಿಲ್ಲೆಗಳು

ವಿವಾದಕ್ಕೆ ಇತಿಶ್ರೀ ಹಾಡಿ: ಅಶೋಕ್ ಹಾರನಹಳ್ಳಿಗೆ ಸಿದ್ದು ಸಲಹೆ

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ

ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ಅವರು ಮೈಸೂರಿನಲ್ಲಿ ನಡೆದ ಸಿದ್ದರಾಮಯ್ಯಅವರ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರ ಜತೆ ಮಾತನಾಡಿರುವ ಸಿದ್ದರಾಮಯ್ಯ, ಸಮಾಜದಲ್ಲಿನ ಎಲ್ಲ ಸಮುದಾಯಗಳ ಬಗ್ಗೆ ನನಗೆ ಗೌರವವಿದೆ. ಇದುವರೆಗಿನ ರಾಜಕಾರಣದಲ್ಲಿ ನಾನು ಯಾವ ಸಮುದಾಯವನ್ನು ಅಗೌರವದಿಂದ ಕಂಡಿಲ್ಲ, ಮೈಸೂರಿನಲ್ಲಿ ಪ.ಮಲ್ಲೇಶ್ ಹೇಳಿಕೆ ಕುರಿತು ಉಂಟಾಗಿರುವ ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಇದನ್ನು ಇಲ್ಲಿಗೇ ನಿಲ್ಲಿಸಿ ಎಲ್ಲರೂ ಒಟ್ಟಿಗೆ ಹೋಗಬೇಕಿದೆ. ಇದೇ ಹಿನ್ನೆಲೆಯಲ್ಲಿ ಮಲ್ಲೇಶ್ ಅವರು ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇನ್ನು ಮುಂದೆ ಯಾವುದೇ ವಿವಾದಗಳಿಗೂ ಅವಕಾಶಮಾಡಿ ಕೊಡುವುದು ಬೇಡ ಎಂದಿದ್ದಾರೆ.

 

 

 

andolanait

Recent Posts

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

1 hour ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

2 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

3 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

3 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

4 hours ago

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

8 hours ago