ಜಿಲ್ಲೆಗಳು

ವಿವಾದಕ್ಕೆ ಇತಿಶ್ರೀ ಹಾಡಿ: ಅಶೋಕ್ ಹಾರನಹಳ್ಳಿಗೆ ಸಿದ್ದು ಸಲಹೆ

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ

ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ.ಮಲ್ಲೇಶ್ ಅವರು ಮೈಸೂರಿನಲ್ಲಿ ನಡೆದ ಸಿದ್ದರಾಮಯ್ಯಅವರ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರ ಜತೆ ಮಾತನಾಡಿರುವ ಸಿದ್ದರಾಮಯ್ಯ, ಸಮಾಜದಲ್ಲಿನ ಎಲ್ಲ ಸಮುದಾಯಗಳ ಬಗ್ಗೆ ನನಗೆ ಗೌರವವಿದೆ. ಇದುವರೆಗಿನ ರಾಜಕಾರಣದಲ್ಲಿ ನಾನು ಯಾವ ಸಮುದಾಯವನ್ನು ಅಗೌರವದಿಂದ ಕಂಡಿಲ್ಲ, ಮೈಸೂರಿನಲ್ಲಿ ಪ.ಮಲ್ಲೇಶ್ ಹೇಳಿಕೆ ಕುರಿತು ಉಂಟಾಗಿರುವ ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಇದನ್ನು ಇಲ್ಲಿಗೇ ನಿಲ್ಲಿಸಿ ಎಲ್ಲರೂ ಒಟ್ಟಿಗೆ ಹೋಗಬೇಕಿದೆ. ಇದೇ ಹಿನ್ನೆಲೆಯಲ್ಲಿ ಮಲ್ಲೇಶ್ ಅವರು ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇನ್ನು ಮುಂದೆ ಯಾವುದೇ ವಿವಾದಗಳಿಗೂ ಅವಕಾಶಮಾಡಿ ಕೊಡುವುದು ಬೇಡ ಎಂದಿದ್ದಾರೆ.

 

 

 

andolanait

Recent Posts

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

2 mins ago

ಕಾಯಿಗಟ್ಟುವ ಸಮಯದಲ್ಲೇ ಹಣ್ಣಾಗುತ್ತಿರುವ ಅರೆಬಿಕಾ ಕಾಫಿ

ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…

8 mins ago

ಮುತ್ತತ್ತಿಯ ನಿಷೇಧಿತ ಪ್ರದೇಶಗಳಲ್ಲಿ ಕಾವೇರಿ ನದಿಗಿಳಿದು ದುಸ್ಸಾಹಸ

ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು…

14 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

14 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

14 hours ago