ಜಿಲ್ಲೆಗಳು

ಅಪರಾಧ ತಡೆಗೆ ಇರಲಿ ಸಹಕಾರ: ಎಸ್‌ಪಿ ಪದ್ಮಿನಿ ಸಾಹು

ಕಳವು ಪ್ರಕರಣಗಳ ಪತ್ತೆಗೆ ತಂಡ ರಚನೆ

ಚಾಮರಾಜನಗರ: ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿರುವ ಕಳವು ಪ್ರಕರಣಗಳನ್ನು ಭೇದಿಸಲು ತಂಡಗಳನ್ನು ರಚಿಸಲಾಗಿದ್ದು ಸಾರ್ವಜನಿಕರು ಯಾವಾಗಲೂ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು.
ಇಲ್ಲಿನ ತಮ್ಮ ಕಾರ್ಯಾಲಯದಲ್ಲೂ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾ.ನಗರದ ವಿವಿಧೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ದೂರುಗಳಿವೆ. ಖುದ್ದು ಪರಿಶೀಲಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಚಾಮರಾಜನಗರ ತಾಲ್ಲೂಕು ಬಿಸಲವಾಡಿ ಕ್ವಾರಿ ದುರಂತದಲ್ಲಿ ಇತ್ತೀಚೆಗೆ ಮೂವರು ಕೂಲಿಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಇನ್ನೂ ಪ್ರಮುಖ ಆರೋಪಿಗಳ ಬಂಧನ ಆಗದಿರುವ ಕುರಿತು ಕೇಳಲಾದ ಪ್ರಶ್ನೆಗೆ ಎಸ್ಪಿ ಅವರು ಸ್ಪಷ್ಟವಾಗಿ ಉತ್ತರಿಸಲಿಲ್ಲ. 20  ದಿನಗಳ ಹಿಂದೆಯಷ್ಟೇ ತಾವು ಅಧಿಕಾರ ವಹಿಸಿಕೊಂಡಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆರೋಪಿಗಳ ಬಂಧನ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಏನಾದರೂ ಇದೆಯಾ ಎಂಬುದರ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.
ಅಪಘಾತ ಸಂಭವಿಸಲು ಕೆಲವೊಮ್ಮೆ ಹದಗೆಟ್ಟ ರಸ್ತೆಗಳೂ ಕಾರಣವಾಗುವುದುಂಟು. ಇಂತಹ ಹಾಳಾದ ರಸ್ತೆಗಳನ್ನು ಗುರುತಿಸಿ ದುರಸ್ತಿಪಡಿಸಲು ಸಂಬಂಧಿಸಿದ ಇಲಾಖೆಯವರಿಗೆ ತಿಳಿಸಲಾಗುವುದು. ಇಲಾಖೆಯಲ್ಲಿ ಕೆಲವೊಂದು ಬದಲಾವಣೆ, ಸುಧಾರಣೆಗಳನ್ನು ತರಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ನುಡಿದರು.

ಒಂದೂವರೆ ವರ್ಷದಿಂದ ನಡೆಯದ ಪ್ರಾಪರ್ಟಿ ರಿಟರ್ನ್ ಪರೇಡ್: ಕಳವು ಮಾಲುಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸುವ ಪ್ರಾಪರ್ಟಿ ರಿಟರ್ನ್ ಪರೇಡ್‌ಅನ್ನು 3 ತಿಂಗಳಿಗೊಮ್ಮೆ ನಡೆಸಬೇಕು ಎಂದಿದ್ದರೂ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ನಡೆಸಿಲ್ಲ ಎಂದು ಎಸ್ಪಿ ಪದ್ಮಿನಿ ಸಾಹು ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಮುಂದಿನ ದಿನಗಳಲ್ಲಿ ನಿಯಮಾನುಸಾರ ನಡೆಸಲಾಗುವುದು ಎಂದು ಹೇಳಿದರು.
ಎಎಸ್‌ಐ, ಮುಖ್ಯಪೇದೆ ಹಾಗೂ ಪೇದೆಗಳ ಸಹಿತ ಹಲವರನ್ನು ಸೇವಾ ಅವಧಿ ಪೂರೈಸಿರುವ ಕಾರಣಕ್ಕೆ ಕೆಲವೊಂದು ಠಾಣೆಗಳಿಂದ ವರ್ಗಾವಣೆ ಮಾಡಲಾಗಿದ್ದರೂ ಅವರು ಅಲ್ಲಿಂದ ಬಿಡುಗಡೆಯಾಗದೇ ಮುಂದುವರಿಯುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಮೇಶ್ ಹಾಜರಿದ್ದರು.

ತಲೆ ಎತ್ತಿದ ಸುಸಜ್ಜಿತ ಪೊಲೀಸ್ ಭವನ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಬಳಿಯ ಆರಕ್ಷಕ ವಸತಿ ಗೃಹಗಳ ಹತ್ತಿರವೇ ಸಭೆ, ಸಮಾರಂಭ, ಮದುವೆ ಇನ್ನಿತರ ಕಾರ್ಯಗಳಿಗೆ ಬಳಕೆಯಾಗುವ ಸುಸಜ್ಜಿತ ಪೊಲೀಸ್ ಭವನ ತಲೆಎತ್ತಿದ್ದು, ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದರ ನಿರ್ಮಾಣ ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು ಎಸ್ಪಿ ಪದ್ಮಿನಿ ಸಾಹು ತಿಳಿಸಿದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ವಸತಿ ನಿಗಮವು 2018ರಲ್ಲೇ ಇದರ ಕಾಮಗಾರಿ ಕೈಗೆತ್ತಿಕೊಂಡಿದ್ದು ಇನ್ನೂ ಕೆಲವೊಂದು ಕೆಲಸ ಬಾಕಿ ಇರುವುದಾಗಿ ಹೇಳಿದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago