ಕಳವು ಪ್ರಕರಣಗಳ ಪತ್ತೆಗೆ ತಂಡ ರಚನೆ
ಚಾಮರಾಜನಗರ: ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿರುವ ಕಳವು ಪ್ರಕರಣಗಳನ್ನು ಭೇದಿಸಲು ತಂಡಗಳನ್ನು ರಚಿಸಲಾಗಿದ್ದು ಸಾರ್ವಜನಿಕರು ಯಾವಾಗಲೂ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು.
ಇಲ್ಲಿನ ತಮ್ಮ ಕಾರ್ಯಾಲಯದಲ್ಲೂ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾ.ನಗರದ ವಿವಿಧೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ದೂರುಗಳಿವೆ. ಖುದ್ದು ಪರಿಶೀಲಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಚಾಮರಾಜನಗರ ತಾಲ್ಲೂಕು ಬಿಸಲವಾಡಿ ಕ್ವಾರಿ ದುರಂತದಲ್ಲಿ ಇತ್ತೀಚೆಗೆ ಮೂವರು ಕೂಲಿಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಇನ್ನೂ ಪ್ರಮುಖ ಆರೋಪಿಗಳ ಬಂಧನ ಆಗದಿರುವ ಕುರಿತು ಕೇಳಲಾದ ಪ್ರಶ್ನೆಗೆ ಎಸ್ಪಿ ಅವರು ಸ್ಪಷ್ಟವಾಗಿ ಉತ್ತರಿಸಲಿಲ್ಲ. 20 ದಿನಗಳ ಹಿಂದೆಯಷ್ಟೇ ತಾವು ಅಧಿಕಾರ ವಹಿಸಿಕೊಂಡಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆರೋಪಿಗಳ ಬಂಧನ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಏನಾದರೂ ಇದೆಯಾ ಎಂಬುದರ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.
ಅಪಘಾತ ಸಂಭವಿಸಲು ಕೆಲವೊಮ್ಮೆ ಹದಗೆಟ್ಟ ರಸ್ತೆಗಳೂ ಕಾರಣವಾಗುವುದುಂಟು. ಇಂತಹ ಹಾಳಾದ ರಸ್ತೆಗಳನ್ನು ಗುರುತಿಸಿ ದುರಸ್ತಿಪಡಿಸಲು ಸಂಬಂಧಿಸಿದ ಇಲಾಖೆಯವರಿಗೆ ತಿಳಿಸಲಾಗುವುದು. ಇಲಾಖೆಯಲ್ಲಿ ಕೆಲವೊಂದು ಬದಲಾವಣೆ, ಸುಧಾರಣೆಗಳನ್ನು ತರಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ನುಡಿದರು.
ಒಂದೂವರೆ ವರ್ಷದಿಂದ ನಡೆಯದ ಪ್ರಾಪರ್ಟಿ ರಿಟರ್ನ್ ಪರೇಡ್: ಕಳವು ಮಾಲುಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸುವ ಪ್ರಾಪರ್ಟಿ ರಿಟರ್ನ್ ಪರೇಡ್ಅನ್ನು 3 ತಿಂಗಳಿಗೊಮ್ಮೆ ನಡೆಸಬೇಕು ಎಂದಿದ್ದರೂ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ನಡೆಸಿಲ್ಲ ಎಂದು ಎಸ್ಪಿ ಪದ್ಮಿನಿ ಸಾಹು ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಮುಂದಿನ ದಿನಗಳಲ್ಲಿ ನಿಯಮಾನುಸಾರ ನಡೆಸಲಾಗುವುದು ಎಂದು ಹೇಳಿದರು.
ಎಎಸ್ಐ, ಮುಖ್ಯಪೇದೆ ಹಾಗೂ ಪೇದೆಗಳ ಸಹಿತ ಹಲವರನ್ನು ಸೇವಾ ಅವಧಿ ಪೂರೈಸಿರುವ ಕಾರಣಕ್ಕೆ ಕೆಲವೊಂದು ಠಾಣೆಗಳಿಂದ ವರ್ಗಾವಣೆ ಮಾಡಲಾಗಿದ್ದರೂ ಅವರು ಅಲ್ಲಿಂದ ಬಿಡುಗಡೆಯಾಗದೇ ಮುಂದುವರಿಯುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಮೇಶ್ ಹಾಜರಿದ್ದರು.
ತಲೆ ಎತ್ತಿದ ಸುಸಜ್ಜಿತ ಪೊಲೀಸ್ ಭವನ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಬಳಿಯ ಆರಕ್ಷಕ ವಸತಿ ಗೃಹಗಳ ಹತ್ತಿರವೇ ಸಭೆ, ಸಮಾರಂಭ, ಮದುವೆ ಇನ್ನಿತರ ಕಾರ್ಯಗಳಿಗೆ ಬಳಕೆಯಾಗುವ ಸುಸಜ್ಜಿತ ಪೊಲೀಸ್ ಭವನ ತಲೆಎತ್ತಿದ್ದು, ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದರ ನಿರ್ಮಾಣ ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು ಎಸ್ಪಿ ಪದ್ಮಿನಿ ಸಾಹು ತಿಳಿಸಿದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ವಸತಿ ನಿಗಮವು 2018ರಲ್ಲೇ ಇದರ ಕಾಮಗಾರಿ ಕೈಗೆತ್ತಿಕೊಂಡಿದ್ದು ಇನ್ನೂ ಕೆಲವೊಂದು ಕೆಲಸ ಬಾಕಿ ಇರುವುದಾಗಿ ಹೇಳಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…