ಜಿಲ್ಲೆಗಳು

ಅಪರಾಧ ತಡೆಗೆ ಇರಲಿ ಸಹಕಾರ: ಎಸ್‌ಪಿ ಪದ್ಮಿನಿ ಸಾಹು

ಕಳವು ಪ್ರಕರಣಗಳ ಪತ್ತೆಗೆ ತಂಡ ರಚನೆ

ಚಾಮರಾಜನಗರ: ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿರುವ ಕಳವು ಪ್ರಕರಣಗಳನ್ನು ಭೇದಿಸಲು ತಂಡಗಳನ್ನು ರಚಿಸಲಾಗಿದ್ದು ಸಾರ್ವಜನಿಕರು ಯಾವಾಗಲೂ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು.
ಇಲ್ಲಿನ ತಮ್ಮ ಕಾರ್ಯಾಲಯದಲ್ಲೂ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾ.ನಗರದ ವಿವಿಧೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ದೂರುಗಳಿವೆ. ಖುದ್ದು ಪರಿಶೀಲಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಚಾಮರಾಜನಗರ ತಾಲ್ಲೂಕು ಬಿಸಲವಾಡಿ ಕ್ವಾರಿ ದುರಂತದಲ್ಲಿ ಇತ್ತೀಚೆಗೆ ಮೂವರು ಕೂಲಿಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಇನ್ನೂ ಪ್ರಮುಖ ಆರೋಪಿಗಳ ಬಂಧನ ಆಗದಿರುವ ಕುರಿತು ಕೇಳಲಾದ ಪ್ರಶ್ನೆಗೆ ಎಸ್ಪಿ ಅವರು ಸ್ಪಷ್ಟವಾಗಿ ಉತ್ತರಿಸಲಿಲ್ಲ. 20  ದಿನಗಳ ಹಿಂದೆಯಷ್ಟೇ ತಾವು ಅಧಿಕಾರ ವಹಿಸಿಕೊಂಡಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆರೋಪಿಗಳ ಬಂಧನ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಏನಾದರೂ ಇದೆಯಾ ಎಂಬುದರ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.
ಅಪಘಾತ ಸಂಭವಿಸಲು ಕೆಲವೊಮ್ಮೆ ಹದಗೆಟ್ಟ ರಸ್ತೆಗಳೂ ಕಾರಣವಾಗುವುದುಂಟು. ಇಂತಹ ಹಾಳಾದ ರಸ್ತೆಗಳನ್ನು ಗುರುತಿಸಿ ದುರಸ್ತಿಪಡಿಸಲು ಸಂಬಂಧಿಸಿದ ಇಲಾಖೆಯವರಿಗೆ ತಿಳಿಸಲಾಗುವುದು. ಇಲಾಖೆಯಲ್ಲಿ ಕೆಲವೊಂದು ಬದಲಾವಣೆ, ಸುಧಾರಣೆಗಳನ್ನು ತರಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ನುಡಿದರು.

ಒಂದೂವರೆ ವರ್ಷದಿಂದ ನಡೆಯದ ಪ್ರಾಪರ್ಟಿ ರಿಟರ್ನ್ ಪರೇಡ್: ಕಳವು ಮಾಲುಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸುವ ಪ್ರಾಪರ್ಟಿ ರಿಟರ್ನ್ ಪರೇಡ್‌ಅನ್ನು 3 ತಿಂಗಳಿಗೊಮ್ಮೆ ನಡೆಸಬೇಕು ಎಂದಿದ್ದರೂ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ನಡೆಸಿಲ್ಲ ಎಂದು ಎಸ್ಪಿ ಪದ್ಮಿನಿ ಸಾಹು ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಮುಂದಿನ ದಿನಗಳಲ್ಲಿ ನಿಯಮಾನುಸಾರ ನಡೆಸಲಾಗುವುದು ಎಂದು ಹೇಳಿದರು.
ಎಎಸ್‌ಐ, ಮುಖ್ಯಪೇದೆ ಹಾಗೂ ಪೇದೆಗಳ ಸಹಿತ ಹಲವರನ್ನು ಸೇವಾ ಅವಧಿ ಪೂರೈಸಿರುವ ಕಾರಣಕ್ಕೆ ಕೆಲವೊಂದು ಠಾಣೆಗಳಿಂದ ವರ್ಗಾವಣೆ ಮಾಡಲಾಗಿದ್ದರೂ ಅವರು ಅಲ್ಲಿಂದ ಬಿಡುಗಡೆಯಾಗದೇ ಮುಂದುವರಿಯುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಮೇಶ್ ಹಾಜರಿದ್ದರು.

ತಲೆ ಎತ್ತಿದ ಸುಸಜ್ಜಿತ ಪೊಲೀಸ್ ಭವನ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಬಳಿಯ ಆರಕ್ಷಕ ವಸತಿ ಗೃಹಗಳ ಹತ್ತಿರವೇ ಸಭೆ, ಸಮಾರಂಭ, ಮದುವೆ ಇನ್ನಿತರ ಕಾರ್ಯಗಳಿಗೆ ಬಳಕೆಯಾಗುವ ಸುಸಜ್ಜಿತ ಪೊಲೀಸ್ ಭವನ ತಲೆಎತ್ತಿದ್ದು, ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದರ ನಿರ್ಮಾಣ ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು ಎಸ್ಪಿ ಪದ್ಮಿನಿ ಸಾಹು ತಿಳಿಸಿದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ವಸತಿ ನಿಗಮವು 2018ರಲ್ಲೇ ಇದರ ಕಾಮಗಾರಿ ಕೈಗೆತ್ತಿಕೊಂಡಿದ್ದು ಇನ್ನೂ ಕೆಲವೊಂದು ಕೆಲಸ ಬಾಕಿ ಇರುವುದಾಗಿ ಹೇಳಿದರು.

andolanait

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

47 mins ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

51 mins ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

58 mins ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

1 hour ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

1 hour ago