ಜಿಲ್ಲೆಗಳು

ಮೈಸೂರು ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ : ಮಾನಸಗಂಗೋತ್ರಿ ಆವರಣದಲ್ಲಿ ಸಕಲ ಸಿದ್ಧತೆ!

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.

ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.

ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.

ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.

ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.

ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.

andolanait

Recent Posts

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

28 mins ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

41 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

49 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

5 hours ago