ಜಿಲ್ಲೆಗಳು

ಮೈಸೂರು ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ : ಮಾನಸಗಂಗೋತ್ರಿ ಆವರಣದಲ್ಲಿ ಸಕಲ ಸಿದ್ಧತೆ!

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.

ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.

ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.

ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.

ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.

ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

5 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

5 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

7 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

7 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago