ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.
ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.
ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.
ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.
ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.
ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.
ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…