ಜಿಲ್ಲೆಗಳು

ಮೈಸೂರು ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ : ಮಾನಸಗಂಗೋತ್ರಿ ಆವರಣದಲ್ಲಿ ಸಕಲ ಸಿದ್ಧತೆ!

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.

ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.

ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.

ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.

ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.

ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

3 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

6 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

7 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

9 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago