ಜಿಲ್ಲೆಗಳು

ಮೈಸೂರು ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ : ಮಾನಸಗಂಗೋತ್ರಿ ಆವರಣದಲ್ಲಿ ಸಕಲ ಸಿದ್ಧತೆ!

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ.

ಗಂಗೋತ್ರಿಯ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಳಿಗೆಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಹಂತದ ತಯಾರಿ ಭರ್ಜರಿಯಾಗಿ ಸಾಗಿದೆ.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಮೈಸೂರು ಫೆಸ್ಟ್ ಜ. 26 ರಿಂದ 28 ರವರೆಗೆ ಅದ್ಧೂರಿಯಾಗಿ ನಡೆಯಲಿದೆ.

ಜ.26 ರಂದು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆಯಲ್ಲಿ ಚಿತ್ರಸಂತೆ ಕಾರ್ಯಕ್ರಮ ನಡೆಯಲಿದೆ.

ಜ. 27 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಗಣಿತ ವಿಭಾಗ ಮುಂಭಾಗದ ಆವರಣದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ.

ಅಂದು ಸಂಜೆ ಜಾರ್ಜಿಯನ್ ನಿಯೋಗದವರು ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಗಳನ್ನು ನೀಡಲಿದ್ದಾರೆ.

ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ 09 ಗಂಟೆಯರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದ ಸುತ್ತಲಿನ ಆವರಣದಲ್ಲಿ ಪ್ಲೀ ಮಾರುಕಟ್ಟೆ, ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಪಕ್ಕದ ಆಟದ ಮೈದಾನದಲ್ಲಿ ಮೈಸೂರು ಫುಡ್ ಫೆಸ್ಟ್, ಜ. 26 ರಿಂದ 28 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 9.30 ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕ್ಲಾಕ್ ಟವರ್ ಮುಂಭಾಗದ ರಸ್ತೆ ಮತ್ತು ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago