ಜಿಲ್ಲೆಗಳು

ಸಾರಿಗೆ ಅಧಿಕಾರಿಗಳಿಗೆ ಮಚ್ಚು ತೋರಿಸಿ ಹೆದರಿಸಿದ ದಂಪತಿ ಬಂಧನ

ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾತಗಳ್ಳಿ ಬಸ್ ನಿಲ್ದಾಣದ ಮಳಿಗೆಗಳನ್ನು ಬಾಡಿಗೆ ಪಡೆದುಕೊಂಡು ಎರಡು ವರ್ಷಗಳಿಂದ ಬಾಡಿಗೆ ಕಟ್ಟದ ಹಿನ್ನೆಲೆ ಡಿ.10ರಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಾಡಿಗೆದಾರರನ್ನು ತೆರವು ಮಾಡಲು ಮುಂದಾಗಿದ್ದರು. ಈ ವೇಳೆ ಬಾಡಿಗೆ ಪಡೆದುಕೊಂಡಿದ್ದ ಕಾಂಗ್ರೆಸ್ ಮುಖಂಡ ಶಫೀಕ್ ಅಹಮ್ಮದ್ ಮತ್ತು ಅವರ ಪತ್ನಿ ಸೈಯದ್ ಮುನಿಬುನ್ನಿಸಾ ಸೇರಿದಂತೆ ಮೂವರು ಮಹಿಳೆಯರು ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಅಲ್ಲದೇ, ಸೈಯದ್ ಮುನಿಬುನ್ನಿಸಾ ಮಚ್ಚು ಹಿಡಿದು ಕೊಲೆ ಬೆದರಿಕೆ ಹಾಕಿ ನಾಪತ್ತೆಯಾಗಿದ್ದರು. ಈ ಸಂಬಂಧ ಕೆಎಸ್‌ಆರ್‌ಟಿಸಿ ವಿಭಾಗೀಯ ಸಾರಿಗೆ ಅಧಿಕಾರಿ ಮರಿಗೌಡ ಉದಯಗಿರಿ ಪೊಲೀಸರಿಗೆ ದೂರು ನೀಡಿದ್ದರು ಎಂದು ಹೇಳಿದರು.ನಗರ ಪೊಲೀಸ್ ಕಮಿಷನರ್ ರಮೇಶ್​ ಬಾನೋತ್​ಘಟನಾ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಖಾಕಿ ಸಮವಸ್ತ್ರ ಧರಿಸಿದ್ದರಿಂದ ಪೊಲೀಸರ ಸಮ್ಮುಖದಲ್ಲೇ ಕೊಲೆ ಬೆದರಿಕೆ ನಡೆಯುತ್ತಿದೆ ಎಂದು ಸಾರ್ವಜನಿಕರು ವಿಡಿಯೋ ತುಣುಕಗಳನ್ನು ನೋಡಿ ಭಾವಿಸಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago