ಜಿಲ್ಲೆಗಳು

ಕಟ್ಟಡ ತೆರವಿಗೆ ನ್ಯಾಯಾಲಯ ತಡೆಯಾಜ್ಞೆ

ಮೈಸೂರು: ಐಬಿ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಅವರ ಹತ್ಯೆಗೆ ಕಾರಣವಾದ ಹಾಗೂ ನಿಯಮಬಾಹಿರವಾಗಿ ಕಟ್ಟಿರುವ ಕಟ್ಟಡ ನೆಲಸಮಕ್ಕೆ ನಗರದ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಸಧ್ಯಕ್ಕೆ ಮಾದಪ್ಪ ಅವರ ಕುಟುಂಬ ನಿರಾಳವಾಗಿದೆ.

ಮಾದಪ್ಪ ಅವರು ನಿಯಮಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಸಂಬಂದ ನಗರಪಾಲಿಕೆ ನೋಟೀಸ್ ಜಾರಿಗೊಳಿಸಿತ್ತು. ನೋಟೀಸ್‌ನ ಗಡುವು ಮುಗಿದಿದ್ದ ಹಿನ್ನೆಲೆಯಲ್ಲಿ ನಗರಪಾಲಿಕೆ ಅಧಿಕಾರಿಗಳು ಮಾದಪ್ಪ ಅವರಿಗೆ ಅಂತಿಮ ನೋಟೀಸ್ ನೀಡಿದ್ದರು.

ನಿಯಮಬಾಹಿರವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವ ಸಂಬಂದ ನಗರಪಾಲಿಕೆಯ ಇಂಜಿನಿಯರುಗಳು ಸೋಮವಾರ ಸಂಜೆ ಕಟ್ಟಡದ ಬಳಿಗೆ ತೆರಳಿ ಕೆಡವಬೇಕಾದ ಕಟ್ಟಡದ ಒಂದು ಭಾಗವನ್ನು ಗುರುತು ಮಾಡಿದ್ದರು.

ಮಂಗಳವಾರ ಬೆಳಿಗ್ಗ ಕಾರ್ಯಾಚರಣೆ ನಡೆಸಲು ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಸೋಮವಾರ ರಾತ್ರಿಯೇ ಮಾದಪ್ಪ ಅವರ ಕುಟುಂಬದವರು ನ್ಯಾಯಾಲಯದ ತಡೆಯಾಜ್ಞೆಯನ್ನು ನಗರಪಾಲಿಕೆ ಅಧಿಕಾರಿಗಳ ಕೈಗಿಟ್ಟಿದ್ದಾರೆ. ಹೀಗಾಗಿ ಕಟ್ಟಡ ಕೆಡವುವ ಕಾರ್ಯಾಚರಣೆಯನ್ನು ನಗರಪಾಲಿಕೆ ಅಧಿಕಾರಿಗಳು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ.

ಮಾದಪ್ಪ ಎಂಬುವರು ನಿಯಮ ಮೀರಿ ಕಟ್ಟಡ ನಿರ್ಮಿಸಿದ್ದರು. ಇದನ್ನು ಆಕ್ಷೇಪಿಸಿದ್ದ ಆರ್.ಎನ್.ಕುಲಕರ್ಣಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಿಯಮ ಉಲ್ಲಂಘನೆ ಖಚಿತವಾದ ಹಿನ್ನೆಲೆಯಲ್ಲಿ ಕಟ್ಟಡ ತೆರವು ಮಾಡುವಂತೆ ಮೈಸೂರು ಮಹಾನಗರ ಪಾಲಿಕೆ ನೋಟಿಸ್ ಜಾರಿಗೊಳಿಸಿತ್ತು.

ಇದರಿಂದ ಅಸಮಾಧಾನಗೊಂಡಿದ್ದ ಮಾದಪ್ಪ ಅವರ ಮಕ್ಕಳು ನ.೪ರಂದು ಸಂಜೆ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ವಾಯುವಿಹಾರ ನಡೆಸುತ್ತಿದ್ದ ಆರ್.ಎನ್.ಕುಲಕರ್ಣಿ ಅವರಿಗೆ ಉದ್ದೇಶಪೂರ್ವಕವಾಗಿ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿದ್ದನ್ನು ಸ್ಮರಿಸಬಹುದು.

ಕಟ್ಟಡ ತೆರವಿಗಾಗಿ ನೀಡಿದ್ದ ಗಡುವು ಮುಗಿದ ಕಾರಣ ವಲಯ ಕಚೇರಿ ಅಧಿಕಾರಿಗಳು ಸೋಮವಾರವೇ ಕಟ್ಟಡ ತೆರವಿಗೆ ಸಿದ್ಧತೆ ನಡೆಸಿದ್ದರು. ಆದರೆ, ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ತಡೆಯಾಜ್ಞೆ ತೆರವುಗೊಳಿಸಿದ ನಂತರ ಕಾರ್ಯಾಚರಣೆ ನಡೆಸುತ್ತೇವೆ. -ಲಕ್ಷ್ಮಿಕಾಂತರೆಡ್ಡಿ, ನಗರಪಾಲಿಕೆ ಆಯುಕ್ತರು.

andolana

Recent Posts

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ…

16 mins ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ…

19 mins ago

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್…

25 mins ago

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

2 hours ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

3 hours ago