ಜಿಲ್ಲೆಗಳು

ಕಟ್ಟಡ ತೆರವಿಗೆ ನ್ಯಾಯಾಲಯ ತಡೆಯಾಜ್ಞೆ

ಮೈಸೂರು: ಐಬಿ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಅವರ ಹತ್ಯೆಗೆ ಕಾರಣವಾದ ಹಾಗೂ ನಿಯಮಬಾಹಿರವಾಗಿ ಕಟ್ಟಿರುವ ಕಟ್ಟಡ ನೆಲಸಮಕ್ಕೆ ನಗರದ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಸಧ್ಯಕ್ಕೆ ಮಾದಪ್ಪ ಅವರ ಕುಟುಂಬ ನಿರಾಳವಾಗಿದೆ.

ಮಾದಪ್ಪ ಅವರು ನಿಯಮಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಸಂಬಂದ ನಗರಪಾಲಿಕೆ ನೋಟೀಸ್ ಜಾರಿಗೊಳಿಸಿತ್ತು. ನೋಟೀಸ್‌ನ ಗಡುವು ಮುಗಿದಿದ್ದ ಹಿನ್ನೆಲೆಯಲ್ಲಿ ನಗರಪಾಲಿಕೆ ಅಧಿಕಾರಿಗಳು ಮಾದಪ್ಪ ಅವರಿಗೆ ಅಂತಿಮ ನೋಟೀಸ್ ನೀಡಿದ್ದರು.

ನಿಯಮಬಾಹಿರವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವ ಸಂಬಂದ ನಗರಪಾಲಿಕೆಯ ಇಂಜಿನಿಯರುಗಳು ಸೋಮವಾರ ಸಂಜೆ ಕಟ್ಟಡದ ಬಳಿಗೆ ತೆರಳಿ ಕೆಡವಬೇಕಾದ ಕಟ್ಟಡದ ಒಂದು ಭಾಗವನ್ನು ಗುರುತು ಮಾಡಿದ್ದರು.

ಮಂಗಳವಾರ ಬೆಳಿಗ್ಗ ಕಾರ್ಯಾಚರಣೆ ನಡೆಸಲು ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಸೋಮವಾರ ರಾತ್ರಿಯೇ ಮಾದಪ್ಪ ಅವರ ಕುಟುಂಬದವರು ನ್ಯಾಯಾಲಯದ ತಡೆಯಾಜ್ಞೆಯನ್ನು ನಗರಪಾಲಿಕೆ ಅಧಿಕಾರಿಗಳ ಕೈಗಿಟ್ಟಿದ್ದಾರೆ. ಹೀಗಾಗಿ ಕಟ್ಟಡ ಕೆಡವುವ ಕಾರ್ಯಾಚರಣೆಯನ್ನು ನಗರಪಾಲಿಕೆ ಅಧಿಕಾರಿಗಳು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ.

ಮಾದಪ್ಪ ಎಂಬುವರು ನಿಯಮ ಮೀರಿ ಕಟ್ಟಡ ನಿರ್ಮಿಸಿದ್ದರು. ಇದನ್ನು ಆಕ್ಷೇಪಿಸಿದ್ದ ಆರ್.ಎನ್.ಕುಲಕರ್ಣಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಿಯಮ ಉಲ್ಲಂಘನೆ ಖಚಿತವಾದ ಹಿನ್ನೆಲೆಯಲ್ಲಿ ಕಟ್ಟಡ ತೆರವು ಮಾಡುವಂತೆ ಮೈಸೂರು ಮಹಾನಗರ ಪಾಲಿಕೆ ನೋಟಿಸ್ ಜಾರಿಗೊಳಿಸಿತ್ತು.

ಇದರಿಂದ ಅಸಮಾಧಾನಗೊಂಡಿದ್ದ ಮಾದಪ್ಪ ಅವರ ಮಕ್ಕಳು ನ.೪ರಂದು ಸಂಜೆ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ವಾಯುವಿಹಾರ ನಡೆಸುತ್ತಿದ್ದ ಆರ್.ಎನ್.ಕುಲಕರ್ಣಿ ಅವರಿಗೆ ಉದ್ದೇಶಪೂರ್ವಕವಾಗಿ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿದ್ದನ್ನು ಸ್ಮರಿಸಬಹುದು.

ಕಟ್ಟಡ ತೆರವಿಗಾಗಿ ನೀಡಿದ್ದ ಗಡುವು ಮುಗಿದ ಕಾರಣ ವಲಯ ಕಚೇರಿ ಅಧಿಕಾರಿಗಳು ಸೋಮವಾರವೇ ಕಟ್ಟಡ ತೆರವಿಗೆ ಸಿದ್ಧತೆ ನಡೆಸಿದ್ದರು. ಆದರೆ, ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ತಡೆಯಾಜ್ಞೆ ತೆರವುಗೊಳಿಸಿದ ನಂತರ ಕಾರ್ಯಾಚರಣೆ ನಡೆಸುತ್ತೇವೆ. -ಲಕ್ಷ್ಮಿಕಾಂತರೆಡ್ಡಿ, ನಗರಪಾಲಿಕೆ ಆಯುಕ್ತರು.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago