ಜಿಲ್ಲೆಗಳು

ಕಟ್ಟಡ ತೆರವಿಗೆ ನ್ಯಾಯಾಲಯ ತಡೆಯಾಜ್ಞೆ

ಮೈಸೂರು: ಐಬಿ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಅವರ ಹತ್ಯೆಗೆ ಕಾರಣವಾದ ಹಾಗೂ ನಿಯಮಬಾಹಿರವಾಗಿ ಕಟ್ಟಿರುವ ಕಟ್ಟಡ ನೆಲಸಮಕ್ಕೆ ನಗರದ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಸಧ್ಯಕ್ಕೆ ಮಾದಪ್ಪ ಅವರ ಕುಟುಂಬ ನಿರಾಳವಾಗಿದೆ.

ಮಾದಪ್ಪ ಅವರು ನಿಯಮಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಸಂಬಂದ ನಗರಪಾಲಿಕೆ ನೋಟೀಸ್ ಜಾರಿಗೊಳಿಸಿತ್ತು. ನೋಟೀಸ್‌ನ ಗಡುವು ಮುಗಿದಿದ್ದ ಹಿನ್ನೆಲೆಯಲ್ಲಿ ನಗರಪಾಲಿಕೆ ಅಧಿಕಾರಿಗಳು ಮಾದಪ್ಪ ಅವರಿಗೆ ಅಂತಿಮ ನೋಟೀಸ್ ನೀಡಿದ್ದರು.

ನಿಯಮಬಾಹಿರವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವ ಸಂಬಂದ ನಗರಪಾಲಿಕೆಯ ಇಂಜಿನಿಯರುಗಳು ಸೋಮವಾರ ಸಂಜೆ ಕಟ್ಟಡದ ಬಳಿಗೆ ತೆರಳಿ ಕೆಡವಬೇಕಾದ ಕಟ್ಟಡದ ಒಂದು ಭಾಗವನ್ನು ಗುರುತು ಮಾಡಿದ್ದರು.

ಮಂಗಳವಾರ ಬೆಳಿಗ್ಗ ಕಾರ್ಯಾಚರಣೆ ನಡೆಸಲು ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಸೋಮವಾರ ರಾತ್ರಿಯೇ ಮಾದಪ್ಪ ಅವರ ಕುಟುಂಬದವರು ನ್ಯಾಯಾಲಯದ ತಡೆಯಾಜ್ಞೆಯನ್ನು ನಗರಪಾಲಿಕೆ ಅಧಿಕಾರಿಗಳ ಕೈಗಿಟ್ಟಿದ್ದಾರೆ. ಹೀಗಾಗಿ ಕಟ್ಟಡ ಕೆಡವುವ ಕಾರ್ಯಾಚರಣೆಯನ್ನು ನಗರಪಾಲಿಕೆ ಅಧಿಕಾರಿಗಳು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ.

ಮಾದಪ್ಪ ಎಂಬುವರು ನಿಯಮ ಮೀರಿ ಕಟ್ಟಡ ನಿರ್ಮಿಸಿದ್ದರು. ಇದನ್ನು ಆಕ್ಷೇಪಿಸಿದ್ದ ಆರ್.ಎನ್.ಕುಲಕರ್ಣಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಿಯಮ ಉಲ್ಲಂಘನೆ ಖಚಿತವಾದ ಹಿನ್ನೆಲೆಯಲ್ಲಿ ಕಟ್ಟಡ ತೆರವು ಮಾಡುವಂತೆ ಮೈಸೂರು ಮಹಾನಗರ ಪಾಲಿಕೆ ನೋಟಿಸ್ ಜಾರಿಗೊಳಿಸಿತ್ತು.

ಇದರಿಂದ ಅಸಮಾಧಾನಗೊಂಡಿದ್ದ ಮಾದಪ್ಪ ಅವರ ಮಕ್ಕಳು ನ.೪ರಂದು ಸಂಜೆ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ವಾಯುವಿಹಾರ ನಡೆಸುತ್ತಿದ್ದ ಆರ್.ಎನ್.ಕುಲಕರ್ಣಿ ಅವರಿಗೆ ಉದ್ದೇಶಪೂರ್ವಕವಾಗಿ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿದ್ದನ್ನು ಸ್ಮರಿಸಬಹುದು.

ಕಟ್ಟಡ ತೆರವಿಗಾಗಿ ನೀಡಿದ್ದ ಗಡುವು ಮುಗಿದ ಕಾರಣ ವಲಯ ಕಚೇರಿ ಅಧಿಕಾರಿಗಳು ಸೋಮವಾರವೇ ಕಟ್ಟಡ ತೆರವಿಗೆ ಸಿದ್ಧತೆ ನಡೆಸಿದ್ದರು. ಆದರೆ, ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ತಡೆಯಾಜ್ಞೆ ತೆರವುಗೊಳಿಸಿದ ನಂತರ ಕಾರ್ಯಾಚರಣೆ ನಡೆಸುತ್ತೇವೆ. -ಲಕ್ಷ್ಮಿಕಾಂತರೆಡ್ಡಿ, ನಗರಪಾಲಿಕೆ ಆಯುಕ್ತರು.

andolana

Recent Posts

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

1 min ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

19 mins ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

36 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

45 mins ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

10 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

12 hours ago