ಜಿಲ್ಲೆಗಳು

ಕೊರೊನಾ ಹಿನ್ನೆಲೆ ಮೈಸೂರಿನ ಶುಕವನ ಬಂದ್‌

ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್‌ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದು ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮೊದಲ ಕೊವಿಡ್‌ ಕೇಸ್‌ ಪತ್ತೆಯಾಗಿದೆ.

ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಳೆದ ಐದು ದಿನಗಳ ಹಿಂದೆಯೇ ಕೊವಿಡ್‌ಗೆ 64 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೀಗೆ ರಾಜ್ಯದ ಎಲ್ಲೆಡೆ ಕೊವಿಡ್‌ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮೈಸೂರಿನಲ್ಲಿ ಶುಕವನವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗುತ್ತಿದೆ.

ಈ ವಾರಾಂತ್ಯದಿಂದ ಕ್ರಿಸ್‌ಮಸ್‌ ಪ್ರಯುಕ್ತ ಹಾಗೂ ಹೊಸ ವರ್ಷದ ಪ್ರಯುಕ್ತ ಹಲವಾರು ಪ್ರವಾಸಿಗರು ಕೇರಳದಿಂದ ಮೈಸೂರಿಗೆ ಆಗಮಿಸಲಿದ್ದು ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ ಶುಕವನ, ಬೋನ್ಸಾಯಿ ವನ ಹಾಗೂ ವಿಶ್ವಂ ವಸ್ತು ಸಂಗ್ರಹಾಲಯಗಳನ್ನೂ ಸಹ ಮುಚ್ಚಲು ನಿರ್ಧರಿಸಲಾಗಿದೆ. ಶುಕವನದಲ್ಲಿ ಪ್ರಪಂಚದ ವಿವಿಧ ಭಾಗಗಳ 2000ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳಿದ್ದು, ಇದು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿತ್ತು. ಸದ್ಯ ಮುಚ್ಚಲಿರುವ ಶುಕವನ ಮುಂದಿನ ಆದೇಶದವರೆಗೂ ಪ್ರವಾಸಿಗರ ಭೇಟಿಗೆ ಅಲಭ್ಯವಾಗಿರಲಿದೆ.

andolana

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

8 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

45 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago