ಜಿಲ್ಲೆಗಳು

ಕೋವಿಡ್: ಮೈಸೂರು ಭಾಗದಲ್ಲಿ ಆಕ್ಸಿಜನ್ ಕೊರತೆ ಇಲ್ಲ

ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆ ಗಳಲ್ಲಿ ಸಿದ್ಧತೆ  ಮೈಸೂರು/ಮಂಡ್ಯ/ಚಾಮರಾಜನಗರ/ಮಡಿಕೇರಿ: ಚೀನಾದಲ್ಲಿ ಪತ್ತೆಯಾಗಿರುವ ಕೋವಿಡ್- ೧೯ ಉಪತಳಿ ಬಿ.೭ ದೇಶದಲ್ಲಿಯೂ  ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಈ ಸಾಂಕ್ರಾಮಿಕ ಈ ಭಾಗದಲ್ಲಿ ವ್ಯಾಪಿಸದಂತೆ ಸೂಕ್ತ ರೀತಿಯಲ್ಲಿ ಎಚ್ಚರಿಕೆವಹಿಸಿವೆ. ಮುಖ್ಯವಾಗಿ ಆಕ್ಸಿಜನ್ ಪ್ಲಾಂಟ್‌ಗಳ ಸಿದ್ಧತೆಗೆ ಆದ್ಯತೆ ನೀಡಲಾಗಿದೆ. ಸದ್ಯ ಈ ಭಾಗದಲ್ಲಿ ಸೋಂಕು ಕಂಡುಬಂದಿಲ್ಲ.
ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳು ಕೋವಿಡ್ ವೈರಸ್ ನಿಯಂತ್ರಣಕ್ಕೆ ಮುಂದಾಗಿವೆ. ಜತೆಗೆ ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವ ಸಂಬಂಧ ಜಾಗೃತಿ ಮೂಡಿಸಲೂ ಚಿಂತನೆನಡೆಸಿವೆ ಎನ್ನಲಾಗಿದೆ. ಈಗಾಗಲೇ ಮೂರು ಅಲೆಗಳನ್ನು ಎದುರಿಸಿದ್ದು, ೨ನೇ ಅಲೆಯಲ್ಲಿ ಮಾತ್ರ ಗಂಭೀರ ಪರಿಣಾಮಗಳನ್ನು ಜನರು ಅನುಭವಿಸಬೇಕಾಯಿತು. ಇದನ್ನು ಗಮನದಲ್ಲಿಟ್ಟುಕೊಂಡು ಈ ಜಿಲ್ಲೆಗಳು ಕೋವಿಡ್ ವಿರುದ್ಧದ ಹೋರಾಟಕ್ಕೆ ಸರ್ವಸನ್ನದ್ಧವಾಗಿವೆ.
ಮೈಸೂರ ಜಿಲ್ಲೆಯಲ್ಲಿ ಕೆ.ಆರ್.ಆಸ್ಪತ್ರೆ, ಜಿಲ್ಲಾಸ್ಪತ್ರೆ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ಒಟ್ಟಾರೆ 15 ಆಕ್ಸಿಜನ್ ಘಟಕಗಳನ್ನು ಸುಸ್ಥಿತಿಗೊಳಿಸಲಾಗಿದೆ. ಆಕ್ಸಿಜನ್ ಕೊರತೆ ಎದುರಾಗುವುದಿಲ್ಲ. ವೈದ್ಯರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಕೋವಿಡ್ 2ನೇ ಅಲೆಯಲ್ಲಿ ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ರಾಷ್ಟ್ರ ಮಟ್ಟದಲ್ಲಿ ಚರ್ಚಿತವಾಗಿತ್ತು. ಹಾಗಾಗಿ ಈ ಬಾರಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮುಂಜಾಗ್ರತೆಯಾಗಿ ಕೋವಿಡ್ ನಿಬರ್ಬಂಧಿಸಲು ಸಿದ್ಧತೆಯಲ್ಲಿ ನಿರತವಾಗಿದೆ. ಜಿಲ್ಲೆಯ ಆಸ್ಪತ್ರೆಗಳಲ್ಲಿ ಅಗತ್ಯ ಆಕ್ಸಿಜನ್, ತುರ್ತು ನಿಗಾ ಘಟಕ (ಐಸಿಯು)ಗಳನ್ನು ಸಜ್ಜುಗೊಳಿಸಿವೆ. ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿಗಳನ್ನೂ ಕೂಡ ಸಿದ್ಧಗೊಳಿಸಲಾಗಿದೆ.
ಕೊಡಗು ಜಿಲ್ಲೆಯ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಮುನ್ನೆಚ್ಚರಿಕೆಯಾಗಿ 400 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ. 15 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಕೊವ್ಯಾಕ್ಸಿನ್ ಲಸಿಕೆಯ ೨ನೇ ಡೋಸ್ ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಪ್ರತಿದಿನ ೧೫೦ ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಕೋವಿಡ್ ಉಪತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಈಗ ಅದರ ಪ್ರಮಾಣವನ್ನು 500ಕ್ಕೆ ಹೆಚ್ಚಿಸಲಾಗಿದೆ. ಪರಿಸ್ಥಿತಿ ಗಂಭೀರವಾದರೆ ಸೋಂಕಿತರ ಚಿಕಿತ್ಸೆಗಾಗಿ ಮಂಡ್ಯದ ಸ್ಯಾಂಜೊ, ಸ್ಪಂದನೆ, ಬೆಳ್ಳೂರಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗಳನ್ನು ಸಿದ್ಧಪಡಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ದಾಸ್ತಾನು ವಿವರ (ಕಿಲೋ ಲೀಟರ್‌ಗಳಲ್ಲಿ)

* ಜಿಲ್ಲಾಸ್ಪತ್ರೆಯಲ್ಲಿ ೭.೦೯೫ ಕಿ.ಲೀ.

* ಯಡಬೆಟ್ಟದಲ್ಲಿರುವ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್)ಯು ಬೋಧನಾ ಆಸ್ಪತ್ರೆಯಲ್ಲಿ ೭.೧೯

* ಕೊಳ್ಳೇಗಾಲದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ೧.೧೧

* ಯಳಂದೂರು ತಾಲ್ಲೂಕು ಆಸ್ಪತ್ರೆಯಲ್ಲಿ ೦.೮೫೧

* ಗುಂಡ್ಲುಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ೧.೧೧

* ಬೇಗೂರು ಸಮುದಾಯ ಆಸ್ಪತ್ರೆಯಲ್ಲಿ ೦.೩೭೦
———————–

ಕೊಡಗು ಜಿಲ್ಲೆಯಲ್ಲಿ ಸಿದ್ಧತೆ

* ಆಕ್ಸಿಜನ್ ೧೩ ಕಿ.ಲೀ.

* ೨೫೦ ಆಕ್ಸಿಜನ್ ಹಾಸಿಗೆ

* ೫೦ ಐಸಿಯು ಹಾಸಿಗೆ

* ೫೦ ವೆಂಟಿಲೇಟರ್

* ೪೨, ೨೧೪ ಮಂದಿ ಬೂಸ್ಟರ್ ಡೋಸ್ ಪಡೆಯಬೇಕಿದೆ


ರಾಜ್ಯ ಸರ್ಕಾರದಿಂದ ಸೂಚನೆ ಬಂದ ಕೂಡಲೇ ಕೋವಿಡ್ ಲಕ್ಷಣಗಳಾದ ಕೆಮ್ಮು, ನೆಗಡಿ, ಜ್ವರ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲು ಸಿಬ್ಬಂದಿಗಳನ್ನು ಸಜ್ಜುಗೊಳಿಸಲಾಗಿದೆ. ಈಗಾಗಲೇ ಬೂಸ್ಟರ್ ಡೋಸ್ ಪಡೆದಿರುವವರಲ್ಲಿ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ ಎಂದು ಮೈಸೂರು ವೈದ್ಯಕೀಯ ಮೂಲಗಳು ತಿಳಿಸಿವೆ.


ಮಂಡ್ಯದ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಸಿಬ್ಬಂದಿ ಹಾಗೂ ಲಸಿಕೆಗೆ ಕೊರತೆ ಇಲ್ಲ. ಜಿಲ್ಲಾಸ್ಪತ್ರೆಯಲ್ಲಿ 13 ಆಕ್ಸಿಜನ್ ಘಟಕ ಹಾಗೂ ಒಂದು ವಿಶೇಷ ಆಕ್ಸಿಜನ್ ತಯಾರಿಸುವ ಘಟಕವನ್ನು ಅಣಿಗೊಳಿಸಲಾಗಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago