ಚಾಮರಾಜನಗರ:ಕಳೆದ ೨ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕೋವಿಡ್ ಮುಂಚೂಣಿ ಕಾರ್ಯಕರ್ತರ ಬಳಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮೊಹಮ್ಮದ್ ಅಕ್ಬರ್ ಅವರು ದರ್ಪ ತೋರಿದ ಘಟನೆ ನಡೆದಿದೆ.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ವಿವಿಧ ಬೇಡಿಕೆಗೆ ಒತ್ತಾಯಿಸಿ ಕೋವಿಡ್ ಮುಂಚೂಣಿ ಕಾರ್ಯಕರ್ತರು ೨ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಪ್ರತಿಭಟನಕಾರರ ಜೊತೆ ಮಾತನಾಡುವ ಭರದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮೊಹಮ್ಮದ್ ಅಕ್ಬರ್ ಅವರು ಅವಾಚ್ಯ ಸನ್ನೆಗಳಿಂದ ಹಾಗೂ ದರ್ಪದಿಂದ ಮಾತನಾಡಿದ್ದು ಕೆಲವು ಸಮಯ ಧರಣಿ ನಿರತರು ಹಾಗೂ ಅಧಿಕಾರಿಯ ವಿರುದ್ಧ ವಾಗ್ವಾದಕ್ಕೆ ಕಾರಣವಾಯಿತು.
ಧರಣಿ ನಿರತ ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ ಅಧಿಕಾರಿ ಮೊಹಮ್ಮದ್ ಅಕ್ಬರ್ ನಡುವೆ ಕೆಲಕಾಲ ಮಾತಿನ ಚಕಾಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿ ಪೋಲೀಸರ ಮಧ್ಯೆ ಪ್ರವೇಶಿಸಿದಿಂದ ತಣ್ಣಗಾಯಿತು. ಅಧಿಕಾರಿಯ ನಡೆಗೆ ಬೇಸತ್ತ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರನ್ನು ಭೇಟಿ ಮಾಡಿ ಅಧಿಕಾರಿಯ ನಡೆ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…